Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾವೇರಿ ನದಿ ನೀರು ಪ್ರಾಧಿಕಾರಕ್ಕೆ ವಾಸ್ತವ ಮನವರಿಕೆ ಮಾಡಿ: ರೈತ ಹಿತರಕ್ಷಣಾ ಸಮಿತಿ ಆಗ್ರಹ

ನವದೆಹಲಿಯಲ್ಲಿ ನ.23ರಂದು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಿಗದಿಯಾಗಿದ್ದು, ರಾಜ್ಯ ಸರ್ಕಾರ ವಾಸ್ತವ ಪರಿಸ್ಥಿತಿ ಮನವರಿಕೆ ಮಾಡಿಕೊಡಲು ಮುಂದಾಗಬೇಕು, ರಾಜ್ಯಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯು ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಮಂಡ್ಯದಲ್ಲಿ ಕಳೆದ 77 ದಿನಗಳಿಂದ ನಡೆಯುತ್ತಿರುವ ನಿರಂತರ ಧರಣಿಯಲ್ಲಿ ಸೋಮವಾರ ಭಾಗವಹಿಸಿದ ಹೋರಾಟಗಾರರು, ನಾಡಿದ ಹಿತ ಕಾಯುವುದಕ್ಕಾಗಿ ಸೂಕ್ತ ಅಂಕ ಅಂಶಗಳನ್ನು ಪ್ರಾಧಿಕಾರದ ಮುಂದಿಡಬೇಕೆಂದು ಆಗ್ರಹಿಸಿದರು.

ರಾಜ್ಯದಲ್ಲಿ ಮಳೆ ಕೊರತೆಯಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಹೀಗಿರುವಾಗ ನೀರು ಬಿಡಲು ಸಾಧ್ಯವಿಲ್ಲ ಎಂದು ವಾದ ಮಂಡಿಸಬೇಕು. ದೇಶದಲ್ಲಿ ಜಲವಿವಾದಗಳ ಇತ್ಯರ್ಥಕ್ಕೆ ರಾಷ್ಟ್ರೀಯ ಜಲನೀತಿ ರೂಪಿಸದೇ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿದೆ, ರಾಷ್ಟ್ರೀಯ ಜಲನೀತಿ ರೂಪಿಸಿ ಕಾವೇರಿ ನದಿ ನೀರು ಜಲ ಹಂಚಿಕೆ ವಿಚಾರಕ್ಕೆ ವೈಜ್ಞಾನಿಕ ಸಂಕಷ್ಟ ಸೂತ್ರ ರೂಪಿಸಬೇಕೆಂಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಧರಣಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ ಬೋರಯ್ಯ, ಸಂಘಟನಾ ಕಾರ್ಯದರ್ಶಿ ಸುನಂದ ಜಯರಾಂ, ರೈತ ಸಂಘದ ಇಂಡುವಾಳು ಚಂದ್ರಶೇಖರ್, ಮುದ್ದೇಗೌಡ, ಕೃಷ್ಣಪ್ರಕಾಶ್, ಕನ್ನಡ ಸೇನೆ ಮಂಜುನಾಥ್, ಎಂ.ಎಲ್ ತುಳಸೀಧರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!