Friday, September 20, 2024

ಪ್ರಾಯೋಗಿಕ ಆವೃತ್ತಿ

ಮೇಳಾಪುರ ಗ್ರಾ.ಪಂ.ಅಧ್ಯಕ್ಷರಾಗಿ ಬೆಟ್ಟೇಗೌಡ ಆಯ್ಕೆ

ಶ್ರೀರಂಗಪಟ್ಟಣ ತಾಲೂಕಿನ ಮೇಳಾಪುರ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಬೆಟ್ಟೇಗೌಡ ಇಂದು ಅವಿರೋಧವಾಗಿ ಆಯ್ಕೆಯಾದರು.

ಪುರುಷೋತ್ತಮ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. ಈ ವೇಳೆ ಬಿಜೆಪಿ ಬೆಂಬಲಿತ ಸದಸ್ಯ ಬೆಟ್ಟೇಗೌಡ ಒಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಬೆಟ್ಟೇಗೌಡರು ಅವಿರೋಧವಾಗಿ ಆಯ್ಕೆ ಯಾಗಿರುವುದಾಗಿ ಚುನಾವಣಾಧಿಕಾರಿ ಬಿಂದು ಘೋಷಣೆ ಮಾಡಿದರು.

ನೂತನ ಅಧ್ಯಕ್ಷರಾಗಿ ಬೆಟ್ಟೇಗೌಡ ಆಯ್ಕೆ ಯಾಗುತ್ತಿದ್ದಂತೆ ಬಿಜೆಪಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ವೇಳೆ ನೂತನ ಅಧ್ಯಕ್ಷ ಬೆಟ್ಟೇಗೌಡ ಅವರನ್ನು ಯುವ ಮುಖಂಡರಾದ ಇಂಡುವಾಳು ಸಚ್ಚಿದಾನಂದ, ತಾ.ಪಂ. ಮಾಜಿ ಅಧ್ಯಕ್ಷ ಟಿ.ಶ್ರೀಧರ್ ಸೇರಿದಂತೆ ಹಲವರು ಅಭಿನಂದಿಸಿದರು.

ಪ್ರತಿಯಾಗಿ ಬೆಟ್ಟೇಗೌಡರು ಸಚ್ಚಿದಾನಂದ ಅವರಿಗೆ ಭಾರೀ ಹೂವಿನ ಹಾರ ಹಾಕಿ ಸನ್ಮಾನಿಸಿದರು.
ಈ ವೇಳೆ ಪಿಡಿಒ ಕೆಂಪಲಿಂಗೇಗೌಡ, ಉಪಾಧ್ಯಕ್ಷೆ ಮಮತಾ, ಗ್ರಾ.ಪಂ ಸದಸ್ಯರಾದ ಮಮತಾ, ವೆಂಕಟೇಶ್, ಧನರಾಜ್, ಪ್ರೇಮಾ ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!