ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಕೆರಗೋಡು ಶಾಖೆ) ಸಹಯೋಗದಲ್ಲಿ ನೂತನ ಕಟ್ಟಡ ನಿರ್ಮಾಣದ ಭೂಮಿ ಪೂಜೆ ಮತ್ತು ಶಿಲಾನ್ಯಾಸ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವು ರೈತರ ಪರವಾಗಿ ಕೆಲಸ ಮಾಡುತ್ತಿದೆ, ರೈತರಿಗೆ ಹಾಲಿನ ದರವನ್ನು ಹೆಚ್ಚಿಸಿದೆ, ಮೈಷುಗರ್ ಕಾರ್ಖಾನೆಯ ಅಭಿವೃದ್ಧಿಗೆ ಸ್ಪಂದಿಸಿ, 3 ಲಕ್ಷಕ್ಕೂ ಹೆಚ್ಚು ಟನ್ ಕಬ್ಬು ಅರೆಯುವ ಮೂಲಕ ಲಾಭದಾಯಕವಾಗಿ ಕಾರ್ಖಾನೆ ಸಾಗಿದೆ, ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಮಟ್ಟದಲ್ಲಿಯೂ ಕಾರ್ಖಾನೆ ಅಭಿವೃದ್ಧಿ ಹೊಂದುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಾಸಕ ಪಿ.ರವಿಕುಮಾರ್ ಗೌಡ ಮಾತನಾಡಿದರು. ನಂತರ ಶಿಲಾನ್ಯಸ ಅನಾವರಣಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೋಗೀಗೌಡ, ಉಪವಿಭಾಗಾಧಿಕಾರಿ ಶಿವಮೂರ್ತಿ, ಡಿಸಿಸಿ ಬ್ಯಾಂಕ್ ಸಿಇಒ ವನಜಾಕ್ಷಿ, ಜನರಲ್ ಮ್ಯಾನೇಜರ್ ರೂಪಶ್ರೀ, ಕೆರಗೋಡು ಬ್ಯಾಂಕ್ ಮ್ಯಾನೇಜರ್ ಪಿ.ಮಂಜುನಾಥ್ ಭಾಗವಹಿಸಿದ್ದರು