Monday, April 29, 2024

ಪ್ರಾಯೋಗಿಕ ಆವೃತ್ತಿ

ಮದ್ದೂರು| ಬಿದರಕೋಟೆ ಗ್ರಾ. ಪಂ ಉಪಾಧ್ಯಕ್ಷರಾಗಿ ಸುಕನ್ಯ ಆಯ್ಕೆ

ವರದಿ: ಪ್ರಭು ವಿ ಎಸ್

ಮದ್ದೂರು ತಾಲೂಕಿನ ಬಿದರಕೋಟೆ ಗ್ರಾಮ ನೂತನ ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಎ ಆರ್ ಸುಕನ್ಯ ಯೋಗಾನಂದ ಅವಿರೋಧವಾಗಿ ಆಯ್ಕೆಯಾದರು.

ಹಿಂದಿನ ಉಪಾಧ್ಯಕ್ಷೆ ಪ್ರೇಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಗಳವಾರ ನಿಗದಿಯಾಗಿದ್ದ ಚುನಾವಣೆ ವೇಳೆ ಸುಕನ್ಯ ರವರನ್ನು ಹೊರತುಪಡಿಸಿ ಮತ್ಯಾರು ನಾಮಪತ್ರ ಸಲ್ಲಿಸಿದ ಕಾರಣ ಚುನಾವಣಾ ಅಧಿಕಾರಿ ತಾ ಪಂ ಇ.ಒ ಮಂಜುನಾಥ್ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಉಪಾಧ್ಯಕ್ಷೆ ಎ.ಆರ್ ಸುಕನ್ಯ, ಮುಂದಿನ ದಿನಗಳಲ್ಲಿ ಅಧ್ಯಕ್ಷರ ಜೊತೆಗೂಡಿ ಗ್ರಾಮದ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸಲಾಗುವುದು. ಈಗಾಗಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳು ಜರುಗುತ್ತಿದ್ದು, ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಈಗಾಗಲೇ ಕ್ರಿಯಾ ಯೋಜನೆ ತಯಾರಿಸಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಸದಸ್ಯರ ಜೊತೆಗೂಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಗ್ರಾಮ ಅಭಿವೃದ್ಧಿಗೆ ಹೆಚ್ಚಿನ ವೇಗ ಕಲ್ಪಿಸಲಾಗುವುದೆಂದರು,

ಈ ವೇಳೆ ಅಧ್ಯಕ್ಷೆ ಮಂಗಳಮ್ಮ, ಸದಸ್ಯರಾದ ಮನು, ಕೃಷ್ಣೆಗೌಡ, ಬಿ ಎಲ್ ಯೋಗೇಶ್, ಮೂರ್ತಿ , ಎ.ಪಿ ಮಮತಾ, ಪ್ರೇಮಾ,ವಸಂತಮ್ಮ, ನಾಗಮ್ಮ, ಮುಖಂಡ ಬಿದರಕೋಟೆ ಕುಶ ಇತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!