Saturday, May 18, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಬೈಕಿಗೆ ಖಾಸಗಿ ಬಸ್ ಡಿಕ್ಕಿ: ನಿವೃತ್ತ ಶಿಕ್ಷಕ ಸಾವು

ಬೈಕಿಗೆ ಖಾಸಗಿ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಬೈಕಿನ ಸವಾರ ಸಾವನ್ನಪ್ಪಿದ್ದ ಘಟನೆ
ಮಳವಳ್ಳಿ ಪಟ್ಟಣದ ಅನಂತರಾಂ ವೃತ್ತದಲ್ಲಿ ಗುರುವಾರ ಬೆಳಿಗ್ಗೆ 7 ಗಂಟೆ ಸಮಯದಲ್ಲಿ ನಡೆದಿದೆ.

ಮಳವಳ್ಳಿ ಪಟ್ಟಣದ ಎನ್ ಇ ಎಸ್ ಬಡಾವಣೆಯ ವಾಸಿ ನಿವೃತ್ತ ಶಿಕ್ಷಕ ವೀರೇಗೌಡ (78)ಮೃತಪಟ್ಟ ವ್ಯಕ್ತಿ.

ಮೈಸೂರು ರಸ್ತೆಯಿಂದ ಪೇಟೆಬೀದಿ ಹೋಗುವ ಸಂದರ್ಭದಲ್ಲಿ ಬೆಂಗಳೂರಿ ಕಡೆಯಿಂದ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದ್ದು , ತೀವ್ರಗಾಯಗೊಂಡಿದ್ದ ಗಾಯಾಳುವನ್ನು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಸಾಗಿಸುವ ಮಾರ್ಗಮಧ್ಯೆಯಲ್ಲಿ ಸಾವನ್ನಪ್ಪಿದ್ದು, ಶವವನ್ನು ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.

ಸ್ಥಳಕ್ಕೆ ಮಳವಳ್ಳಿ ಪಟ್ಟಣದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!