ಮಾಜಿ ಸಚಿವ ಹಾಗೂ ಶಾಸಕ ಪಿ.ಎಂ ನರೇಂದ್ರಸ್ವಾಮಿ ರವರ 61 ನೇ ವರ್ಷದ ಹುಟ್ಟುಹಬ್ಬ ಅಂಗವಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಳವಳ್ಳಿ ತಾಲ್ಲೂಕಿನ ಮಾರೇಹಳ್ಳಿ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸರಳವಾಗಿ ಆಚರಿಸಿದರು.
ನಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ ಮಾತನಾಡಿ, ರಾಜ್ಯದಲ್ಲಿ ತೀವ್ರ ಬರಗಾಲ ಇದ್ದು ಮತ್ತು ಲೋಕಸಭೆಯ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ನಮ್ಮ ನಾಯಕ ಪಿ.ಎಂ ನರೇಂದ್ರಸ್ವಾಮಿ ಅವರ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸುತ್ತಿದ್ದೇವೆ. ಅವರಿಗೆ ರಾಜಕೀಯ ಜೀವನದಲ್ಲಿ ಇನ್ನೂ ಉತ್ತಮ ಮಟ್ಟದ ಭವಿಷ್ಯ ರೂಪಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತೇವೆ ಎಂದರು. ಬಳಿಕ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿಪಿ ರಾಜು, ತಾ.ಪಂ ಮಾಜಿ ಅಧ್ಯಕ್ಷ ರಾದ ವಿಶ್ವಾಸ್, ಕುಂದೂರು ಪ್ರಕಾಶ, ಮಾರ್ಕಾಲುಮಾಧು,ಮಾಜಿ ಬ್ಲಾಕ್ ಅಧ್ಯಕ್ಷ ದೇವರಾಜು,ಪುರಸಭೆ ಸದಸ್ಯ ಶಿವಸ್ವಾಮಿ, ಪ್ರಮೀಳಾ ಮುಖಂಡರಾದ ಅಂಬರೀಶ್. ಪುಟ್ಟಸ್ವಾಮಿ.ರಮೇಶ್. ಲಿಂಗರಾಜು. ಶಿವ ಮಾದೇಗೌಡ ದ್ಯಾಪೇಗೌಡ.ದಿಲೀಪ್. ಶಾಂತರಾಜು ಸೇರಿದಂತೆ ಕಾಂಗ್ರೆಸ್ ಮುಖಂಡರುಇದ್ದರು.