ದೇಶದಲ್ಲಿ ಮತ್ತೊಂದು ಗೋದ್ರಾ ಹಾಗೂ ಪುಲ್ವಾಮಾ ಮಾದರಿ ದಾಳಿ ಮರುಕಳಿಸಬಹುದು ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಅವರ ವಿಚಾರಣೆ ನಡೆಸಬೇಕೆಂದು ಎಂದು ಬಿಜೆಪಿ ಮುಖಂಡರು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರಿಗೆ ದೂರು ಸಲ್ಲಿಸಿದರು.
ಕಾಂಗ್ರೆಸ್ ವರಿಷ್ಠರಾಗಿರುವ ಬಿ.ಕೆ.ಹರಿಪ್ರಸಾದ್ ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರತಿಷ್ಠಾಪನೆ ನಡೆಯುವ ಸಂದರ್ಭದಲ್ಲಿ ಈ ರೀತಿ ಹೇಳಿಕೆ ನೀಡಿರುವುದು ಅನುಮಾನಗಳಿಗೆ ಕಾರಣವಾಗಿದೆ. ಆದ್ದರಿಂದ ಕೂಡಲೇ ವಿಚಾರಣೆ ನಡೆಸಬೇಕೆಂದು ಮನವಿ ಮಾಡಿದರು.
ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ವಿಚಾರಣೆ ಮಾಡಿದರೆ ಮುಂದಾಗುವ ಅನಾಹುತದ ಬಗ್ಗೆ ಮಾಹಿತಿ ಸಿಗಬಹುದು ಎಂದು ದೂರಿನಲ್ಲಿ ಕೋರಿದ್ದಾರೆ.
ಈ ಸಂದರ್ಭದಲ್ಲಿ ಮುಖಂಡರಾದ ಸಿ.ಟಿ.ಮಂಜುನಾಥ್, ಎಸ್ ಶಿವಕುಮಾರ್ ಆರಾಧ್ಯ, ಪ್ರಸನ್ನ ಕುಮಾರ್, ಆನಂದ್, ಹೊಸಹಳ್ಳಿ ಶಿವು, ಎಚ್ ಕೆ ಮಂಜುನಾಥ್ ಹಾಜರಿದ್ದರು.