ಹಿಜಾಬ್ ಗಲಾಟೆ, ವ್ಯಾಪಾರ ಬಹಿಷ್ಕಾರ, ಕೋಮು ಬೆಂಕಿ ಹಚ್ಚುವಾಗ ಇಲ್ಲದ ಪ್ರೀತಿ ಈಗ ಬಂದಿದೆ! ಈಗ ಬಿಜೆಪಿಯ ಒಬ್ಬೊಬ್ಬರೇ ನಾಯಕರು ಮುಸ್ಲಿಮರು ನನ್ನ ಹೃದಯದಲ್ಲಿದ್ದಾರೆ ಎನ್ನುತ್ತಿದ್ದಾರೆ! ಬಣ್ಣ ಬದಲಿಸುವ ಬಿಜೆಪಿಗರನ್ನು ಕಂಡು ಊಸರವಳ್ಳಿಯೂ ನಾಚುತ್ತದೆ! ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಬಿಜೆಪಿ ಮುಖಂಡರೇ ಇದು ನಿಮ್ಮ ಓಲೈಕೆ ರಾಜಕಾರಣದ ವ್ಯಾಖ್ಯಾನದೊಳಗೆ ಬರುವುದಿಲ್ಲವೇ? ಎಂದು ಪ್ರಶ್ನಿಸಿದೆ.
ಹಿಜಾಬ್ ಗಲಾಟೆ, ವ್ಯಾಪಾರ ಬಹಿಷ್ಕಾರ, ಕೋಮು ಬೆಂಕಿ ಹಚ್ಚುವಾಗ ಇಲ್ಲದ ಪ್ರೀತಿ ಈಗ ಬಂದಿದೆ!
ಈಗ ಬಿಜೆಪಿಯ ಒಬ್ಬೊಬ್ಬರೇ ನಾಯಕರು ಮುಸ್ಲಿಮರು ನನ್ನ ಹೃದಯದಲ್ಲಿದ್ದಾರೆ ಎನ್ನುತ್ತಿದ್ದಾರೆ!ಬಣ್ಣ ಬದಲಿಸುವ ಬಿಜೆಪಿಗರನ್ನು ಕಂಡು ಊಸರವಳ್ಳಿಯೂ ನಾಚುತ್ತದೆ!@BJP4Karnataka,
ಇದು ನಿಮ್ಮ ಓಲೈಕೆ ರಾಜಕಾರಣದ ವ್ಯಾಖ್ಯಾನದೊಳಗೆ ಬರುವುದಿಲ್ಲವೇ? pic.twitter.com/JhkyqLhZYv— Karnataka Congress (@INCKarnataka) March 19, 2023
“>ಮುಸ್ಲಿಮರು ಒಳ್ಳೆಯವರು, ಹಿಂದೂಗಳೇ ಕಿಡಿಗೇಡಿಗಳು – ಈಶ್ವರಪ್ಪ, ನಾನು ಬೇರೆ ಬಿಜೆಪಿಗರಂತಲ್ಲ, ಮುಸ್ಲಿಮರೇ ನನ್ನ ಬಂಧುಗಳು – ಉಮಾನಾಥ ಕೋಟ್ಯಾನ್, ಮುಸ್ಲಿಮರು ನನ್ನ ಹೃದಯದಲ್ಲಿದ್ದಾರೆ – ಲಕ್ಷ್ಮಣ್ ಸವದಿ, ನಾನು ಎಂದಿಗೂ ಮುಸ್ಲಿಮರ ಪರ – ಉದಯ್ ಗರುಡಾಚಾರ್ ಹೇಳಿದ್ದಾರೆ. ಬಿಜೆಪಿ ನಾಯಕರಿಗೆ ಏಕಾಏಕಿ “ತುಷ್ಟಿಕರಣ” ರಾಜಕೀಯ ನೆನಪಾಗಿದೆ! ಎಂದು ಕಾಂಗ್ರೆಸ್ ಪಕ್ಷವು ಟ್ವೀಟ್ ನಲ್ಲಿ ಕಾಲೆಳೆದಿದೆ.