Thursday, September 19, 2024

ಪ್ರಾಯೋಗಿಕ ಆವೃತ್ತಿ

ಬಿಜೆಪಿ ಕುರ್ಚಿಗಳಿಗಷ್ಟೇ ಅಲ್ಲ ಕುರ್ಚಿ ಮೇಲೆ ಕೂರುವವರಿಗೂ ಹಣ : ಕಾಂಗ್ರೆಸ್ ಆರೋಪ

“ಹಿಂದಿನ ಜನಸಂಕಟಯಾತ್ರೆಯಲ್ಲಿ ಖಾಲಿ ಕುರ್ಚಿ ದರ್ಶನ ಪಡೆದ ಬಿಜೆಪಿ ಈಗ ಅಮಿತ್ ಶಾ ಎದುರು ಮಾನ ಉಳಿಸಿಕೊಳ್ಳಲು ಕುರ್ಚಿಗಳಿಗಷ್ಟೇ ಅಲ್ಲ ಕುರ್ಚಿ ಮೇಲೆ ಕೂರುವವರಿಗೂ ಹಣ ಕೊಟ್ಟು ಕರೆಸಿದೆ. ಈ ಹಣ ಯಾವುದು?” ಎಂದು ಬಿಜೆಪಿಯನ್ನು ಕಾಂಗ್ರೆಸ್ ಪ್ರಶ್ನಿಸಿದೆ.

ವಿಡಿಯೊವೊಂದನ್ನು ತನ್ನ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, “ಈ ಹಣ 40% ಕಮಿಷನ್ ಲೂಟಿಯದ್ದೇ? ಹುದ್ದೆಗಳ ಮಾರಾಟದ ಸಂಪಾದನೆಯೇ? ಮಂತ್ರಿಗಿರಿ ಮಾರಾಟದಿಂದ ಬಂದ ಹಣವೇ?” ಎಂದು ಕೇಳಿದೆ.

“>

ಮತ್ತೊಂದು ಟ್ವೀಟ್‌ನಲ್ಲಿ, “ಚುನಾವಣೆಗಾಗಿ ಕರ್ನಾಟಕದ ಕಡೆ ‘ದಂಡ’ಯಾತ್ರೆ ಕೈಗೊಂಡಿದ್ದಾರೆ ಬಿಜೆಪಿಯ ದೆಹಲಿ ನಾಯಕರು! ಗಡಿ ವಿವಾದ ಬಗೆಹರಿಸಾಲಾಗದ ಅಮಿತ್ ಶಾ ಅವರ ಮಾತಿಗೆ ಮಹಾರಾಷ್ಟ್ರ ಕಿಮ್ಮತ್ತು ನೀಡುತ್ತಿಲ್ಲ. ಈ ಕಿಮ್ಮತ್ತಿಲ್ಲದ ವ್ಯಕ್ತಿಗೆ ಕರ್ನಾಟಕದ ಜನತೆ ಬೆಲೆ ಕೊಡುವುದು ಅಸಂಭವ! ಬಿಜೆಪಿ ಅದೆಷ್ಟೇ ಸರ್ಕಸ್ ನಡೆಸಿದರೂ ಜನರ ತಿರಸ್ಕಾರ ಎದುರಿಸುವುದು ನಿಶ್ಚಿತ” ಎಂದಿದೆ.

“ಚುನಾವಣೆಗಾಗಿ ಕರ್ನಾಟಕದತ್ತ ಮುಖ ಮಾಡುತ್ತಿರುವ ಮೋದಿ – ಶಾ ಜೋಡಿ ಕರ್ನಾಟಕ ಸಂಕಷ್ಟ ಎದುರಿಸುತ್ತಿದ್ದಾಗ ನಾಪತ್ತೆಯಾಗಿದ್ದರು. ‘ಕಷ್ಟಕ್ಕೆ ಬರಬೇಡ, ಚುನಾವಣೆಗೆ ಮಾತ್ರ ಬಿಡಬೇಡ’ ಎಂಬಂತಿದೆ ಅವರ ನಡೆ. ಮಂಡ್ಯದಲ್ಲಿ ರೈತರು ಹಲವು ದಿನಗಳಿಂದ ತಮ್ಮ ಬೇಡಿಕೆ ಮುಂದಿಟ್ಟು ಪ್ರತಿಭಟಿಸುತ್ತಿದ್ದಾರೆ, ಬಿಜೆಪಿಗೆ ನೈಜ ಕಾಳಜಿ ಇದ್ದರೆ ಅವರ ಬಳಿ ಹೋಗಲಿ” ಎಂದು ಆಗ್ರಹಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!