Thursday, September 19, 2024

ಪ್ರಾಯೋಗಿಕ ಆವೃತ್ತಿ

ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಗೆ ಒತ್ತು : ಸಚ್ಚಿದಾನಂದ

ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಸಂಘಟಿಸಿ ಅಧಿಕಾರಕ್ಕೆ ತರುವುದಕ್ಕಾಗಿ ಶ್ರಮವಹಿಸಿ ಒತ್ತು ನೀಡಲಾಗುವುದು ಎಂದು ಶ್ರೀರಂಗಪಟ್ಟಣ ವಿಧಾಸಭಾ ಕ್ಷೇತ್ರದ ಬಿಜೆಪಿ ಮುಖಂಡ ಸಚ್ಚಿದಾನಂದ ಇಂಡವಾಳು ಹೇಳಿದರು.

ಮಂಡ್ಯನಗರದಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಗೆ ಮೊದಲ ಬಾರಿ ಭೇಟಿ ನೀಡಿದಾಗ ಜಿಲ್ಲಾಧ್ಯಕ್ಷ ಉಮೇಶ್ ಮತ್ತು ಪದಾಧಿಕಾರಿಗಳ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಬಿಜೆಪಿ ರಾಜ್ಯ ಕಚೇರಿಯಲ್ಲಿ ಪಕ್ಷದ ತತ್ವ-ಸಿದ್ದಾಂತಗಳಿಗೆ ಬದ್ದನಾಗಿ ಬಿಜೆಪಿ ಸೇರ್‍ಪಡೆಯಾಗಿದ್ದೇನೆ, ಎಲ್ಲಾ ಹಿರಿಯರ, ಜಿಲ್ಲಾಧ್ಯಕ್ಷರ, ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ, ಗೋಪಾಲಯ್ಯ ಸೇರಿದಂದೆ ಎಲ್ಲಾ ಹಿರಿಯ ಸಚಿವರ ಮಾರ್ಗದರ್ಶನದಲ್ಲಿ ತಾಲೂಕು ಘಟಕಗಳ ವಿಶ್ವಾಸದ ಮೇರೆಗೆ ಬಿಜೆಪಿಯನ್ನು ತಳಮಟ್ಟದಿಂದ ಕಟ್ಟುತ್ತೇವೆ ಎಂದರು.

ಮುಂದಿನ ದಿನಗಳಲ್ಲಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನ ವಿಧಾನಸಭೆಗೆ ಕಳಿಸುವವರೆಗೂ ಪಕ್ಷ ಸಂಘಟನೆ ಮಾಡೋಣ, ಎಲ್ಲರೂ ಒಗ್ಗಟ್ಟಾಗಿ, ನಮ್ಮ ಬೆಂಬಲಿಗರು ಬಿಜೆಪಿ ಪಕ್ಷಕ್ಕೆ ಸೇರ್‍ಪಡೆಯಾಗಿದ್ದಾರೆ, ಹೊಸಬರು-ಹಳಬರು ಎನ್ನುವ ಭೇದವಿಲ್ಲದೆ, ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರ ಭಾವನೆಗಳಿಗೆ ದಕ್ಕೆಯಾಗದ ರೀತಿ ನಾವು ನಡೆದುಕೊಳ್ಳುತ್ತೇವೆ ಎಂದು ನುಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಉಮೇಶ್ ಮಾತನಾಡಿ, ಜಿಲ್ಲೆಯ ಯುವ ಮುಖಂಡ ಇಂಡವಾಳು ಸಚ್ಚಿದಾನಂದ ಅವರು ಬಿಜೆಪಿ ಸೇರಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿರುವುದು ಸಂತಸ. ಮುಂದಿನ ದಿನಗಳಲ್ಲಿ ರಾಜಕೀಯ ಶಕ್ತಿಯಾಗಿ ಬೆಳೆದು ಎಂ.ಎಲ್.ಎ, ಎಂ.ಪಿ. ಆಗುವ ಎಲ್ಲಾ ಸನ್ನಿವೇಶಗಳು ಸೃಷ್ಠಿಯಾಗಲಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಡಾ.ಸದಾನಂದ, ಹಿಂದುಳಿದ ಮೋರ್ಚಾ ಜಿಲ್ಲಾಧ್ಯಕ್ಷ ರಮೇಶ್‌ವಿಶ್ವಕರ್ಮ, ನಗರ ಮೋರ್ಚಾ ಅಧ್ಯಕ್ಷ ವಿವೇಕ್, ಮಾಜಿ ಅಧ್ಯಕ್ಷ ಎಚ್.ಆರ್.ಅರವಿಂದ್, ಶಂಕರ್, ಹನುಮಂತು ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!