ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡಿ ಬೆಳೆಸುವ ಮೂಲಕ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಯುವ ನಾಯಕ ಅಶೋಕ್ ಜಯರಾಮ್ ತಿಳಿಸಿದರು.
ಮಂಡ್ಯ ನಗರದ ಶ್ರೀ ವಿದ್ಯಾ ಗಣಪತಿ ದೇವಾಲಯದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ಅವರ ಜನ್ಮದಿನದ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ಜನಸೇವೆ ಮಾಡಲು ರಾಜಕೀಯ ಶಕ್ತಿ ಮತ್ತು ಅಧಿಕಾರ ಅವಶ್ಯವಿದೆ. ಸಿ.ಪಿ. ಉಮೇಶ್ ಅವರು ಪಕ್ಷವನ್ನು ಉತ್ತಮವಾಗಿ ಸಂಘಟಿಸುತ್ತಿ಼ದ್ದು,ದೇವರು ಅವರಿಗೆ ಆಯಸ್ಸು, ಆರೋಗ್ಯ ವೃದ್ಧಿಸಲಿ ಎಂದು ಕೋರಿದರು.
ಬಿಜೆಪಿ ಮುಖಂಡ ಚಂದಗಾಲು ಶಿವಣ್ಣ ಮಾತನಾಡಿ, ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಸಿ.ಪಿ.ಉಮೇಶ್ ಅವರ ರಾಜಕೀಯ ಭವಿಷ್ಯ ಉಜ್ವಲವಾಗಿರಲಿ, ಮುಂದಿನ ದಿನಗಳಲ್ಲಿ ರಾಜಕೀಯ ಶಕ್ತಿಯಾಗಿ ಬೆಳೆದು ಜಿಲ್ಲೆಯ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದರು.
ಬಿಜೆಪಿಯನ್ನು ಸಂಘಟನಾತ್ಮಕವಾಗಿ ಜಿಲ್ಲೆಯಾದ್ಯಂತ ಸಂಚರಿಸಿ ಬೆಳೆಸುತ್ತಿರುವ ಸಿ.ಪಿ. ಉಮೇಶ್ ಅವರ ಆಯಸ್ಸು,ಆರೋಗ್ಯ ವೃದ್ಧಿಯಾಗಲಿ ಎಂದರು.
ಬಿಜೆಪಿ ಸ್ಲಂ ಮೋರ್ಚಾ ಮಾಜಿ ಅಧ್ಯಕ್ಷ ವಸಂತ್ ಕುಮಾರ್, ಯುವ ಮುಖಂಡ ಕೇಶವ್, ಜಿಲ್ಲಾ ಮಾಧ್ಯಮ ಪ್ರಮುಖ ನಾಗಾನಂದ, ಚಾಮರಾಜ್, ಪರೀಕ್ಷಿತ್, ನರಸಿಂಹಮೂರ್ತಿ, ನಗರಸಭಾ ನಾಮಿನಿ ಸದಸ್ಯರಾದ ಪ್ರಸನ್ನ, ಕ್ರಾಂತಿ ಮಂಜು, ಚಂದ್ರ, ಯುವ ಮುಖಂಡ ಹರ್ಷ, ಸಂಜು ಮತ್ತಿತರರಿದ್ದರು.