ರಾಜ್ಯ ಕಾಂಗ್ರೆಸ್ ಸರ್ಕಾರವು ಭ್ರಷ್ಟಾಚಾರದಲ್ಲಿ ನಿತರವಾಗಿದೆ ಎಂದು ಆರೋಪಿಸಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಪ್ರತಿಭಟಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ, ಇಂಧನ ಸಚಿವ ಕೆ.ಜೆ. ಜಾರ್ಜ್ ಕಾಣೆಯಾಗಿದ್ದಾರೆ, ಹುಡುಕಿ ಕೊಟ್ಟವರಿಗೆ ಸಿಂಗಲ್ ಪೇಸ್ ವಿದ್ಯುತ್ ಉಚಿತ, ಕನ್ನಡಿಗರ ಹಣವನ್ನು ಹೊರ ರಾಜ್ಯದ ಚುನಾವಣೆಗೆ ಕಾಂಗ್ರೆಸ್ ಬಳಕೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜಧಾನಿಯಲ್ಲಿ ನಡೆದಿರುವ ಐಟಿ ದಾಳಿಯಲ್ಲಿ ನೂರಾರು ಕೋಟಿ ಹಣ ಪತ್ತೆಯಾಗಿದೆ, ಹಣದ ಮೂಲ ಕಾಂಗ್ರೆಸ್ಸಿಗರಿಗೆ ಸೇರಿದ್ದಾಗಿದೆ, ಹೊರ ರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆಗೆ ಕರ್ನಾಟಕ ಸರ್ಕಾರ ಹಣ ಸಂಗ್ರಹಿಸಿ ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಕಳುಹಿಸಿಕೊಡುತ್ತಿದೆ, ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಸರ್ಕಾರ ಎಟಿಎಂ ಆಗಿ ಪರಿವರ್ತನೆಯಾಗಿದೆ, ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಪಕ್ಷದ ಮುಖಂಡರಾದ ಅಶೋಕ್ ಜಯರಾಂ, ಯತ್ತಗದಹಳ್ಳಿ ಸಿದ್ದರಾಮಯ್ಯ, ಸಿ.ಟಿ.ಮಂಜುನಾಥ್, ಬೇಕರಿ ಅರವಿಂದ್, ನಗರ ಅಧ್ಯಕ್ಷ ವಿವೇಕ್, ನಾಗಾನಂದ್, ಪ್ರಸನ್ನ, ಹನಿಯಂಬಾಡಿ ನಾಗರಾಜ್, ಸುರೇಶ್, ಬಿ.ಟಿ ಶಿವಲಿಂಗಯ್ಯ, ಮಹಾಂತಪ್ಪ ನೇತೃತ್ವ ವಹಿಸಿದ್ದರು