1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ 31 ವರ್ಷಗಳ ನಂತರ ಆರೋಪಿಯನ್ನು ಬಂಧಿಸಿರುವುದನ್ನು ಖಂಡಿಸಿ ಮಂಡ್ಯದಲ್ಲಿ ಬಿಜೆಪಿ ಕಾಯಕರ್ತರು ಪ್ರತಿಭಟನೆ ನಡೆಸಿದರು.
ಮಂಡ್ಯನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ಕಾರ್ಯಕರ್ತರು, ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಗೆ ಸಿದ್ಧವಾಗಿದ್ದು ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ 31 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ ನೀಡಿ ಇಂದು ಕಾರ್ಯಕರ್ತ ಶ್ರೀಕಾಂತ್ ಪೂಜಾರಿಯನ್ನ ಬಂಧಿಸಿದೆ, ಈ ತಕ್ಷಣ ಆತನನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಶ್ರೀರಾಮ ಮಂದಿರ ಲೋಕಾರ್ಪಣೆಗೆ ದಿನ ನಿಗದಿಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಭಯ ಹುಟ್ಟಿಸಿದೆ. ಹಳೆಯ ಕೇಸುಗಳನ್ನು ಕೆದಕಿ ಕಾರ್ಯಕರ್ತರನ್ನು ಬೆದರಿಸಲು ಯತ್ನಿಸುತ್ತಿದೆ. ಇದು ಕಾಂಗ್ರೆಸ್ ಪಕ್ಷದ ದ್ವೇಷದ ರಾಜಕಾರಣ ಅಷ್ಟೇ ಅಲ್ಲದೆ ಹಿಂದೂ ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಅಶೋಕ್ ಜಯರಾಂ, ಸಿದ್ದರಾಮಯ್ಯ, ಡಾ.ಇಂದ್ರೇಶ್, ಸಾದೊಳಲು ಸ್ವಾಮಿ, ಇಂಡುವಾಳು ಸಚ್ಚಿದಾನಂದ, ಸಿ.ಟಿ ಮಂಜುನಾಥ್, ಮಹಾಂತಪ್ಪ, ವಿವೇಕ್,ಶಿವಕುಮಾರ್ ಆರಾಧ್ಯ,ಬಿ.ಟಿ ಶಿವಲಿಂಗಯ್ಯ, ಹರ್ಷ, ಅಶೋಕ್ ಕುಮಾರ್, ಪ.ನ. ಸುರೇಶ್ ನೇತೃತ್ವ ವಹಿಸಿದ್ದರು.