Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಬಿಜೆಪಿ ರೈತ ಮೋರ್ಚಾ ಪದಗ್ರಹಣ ಕಾರ್ಯಕ್ರಮ

ಬಿಜೆಪಿ ಜಿಲ್ಲಾ ರೈತಮೋರ್ಚಾ ಆಯೋಜಿಸಿದ್ದ ತಾಲೂಕು ರೈತಮೋರ್ಚಾ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಮಂಡ್ಯದ ಬಿಜೆಪಿ ಕಚೇರಿ ಆವರಣದಲ್ಲಿ ನಡೆಯಿತು. ಶ್ರೀರಂಗಪಟ್ಟಣ ತಾಲ್ಲೂಕು ಅಧ್ಯಕ್ಷರಾಗಿ ಸತೀತ್ ಹನಿಯಂಬಾಡಿ ನೇಮಕಗೊಂಡರು.

ನಂತರ ಮಾತನಾಡಿದ ಸತೀಶ್, ಇಂದು ಬಿಜೆಪಿ ಜಿಲ್ಲಾ ರೈತಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್‌ ಜಯರಾಂ ಮತ್ತು ಮುಖಂಡರ ಸಮ್ಮುಖದಲ್ಲಿ ನೇಮಕಗೊಂಡಿದ್ದು, ಎಲ್ಲ ಪದಾಧಿಕಾರಿಗಳ ಜೊತೆ ಸೇರಿ ರೈತ ಪರ ಹೋರಾಟಗಳಲ್ಲಿ ಭಾಗಿಯಾಗುವುದರ ಮೂಲಕ ರೈತರ ಪರವಾಗಿ ನಿಲ್ಲುತ್ತೇವೆ ಎಂದರು.

ಬಿಜೆಪಿ ಜಿಲ್ಲಾ ರೈತಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್‌ಜಯರಾಂ ಮಾತನಾಡಿ, ಬಿಜೆಪಿ ಜಿಲ್ಲಾ ರೈತಮೋರ್ಚಾದಲ್ಲಿ 8 ಮಂಡಲಗಳಿದ್ದು ಶ್ರೀರಂಗಪಟ್ಟಣ ಮಂಡಲದ ರೈತ ಮೋರ್ಚಾದ ಅಧ್ಯಕ್ಷರಾಗಿ ಸಾಮಾಜಿಕ ಕಳಕಳಿವಿರುವ ಸತೀಶ್ ಅವರನ್ನ ನೇಮಕ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ರೈತ ಮೋರ್ಚಾದ ಪಕ್ಷ ಸಂಘಟನೆ ಮತ್ತು ಮಂಡ್ಯ ಜಿಲ್ಲೆಯ ರೈತರ ಸಮಸ್ಯೆಯನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಕೆಲಸವನ್ನು ಮಾಡಲಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ಮಳವಳ್ಳಿ ಅಶೋಕ್‌ಕುಮಾರ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ,ಮುಖಂಡರಾದ ಇಂಡುವಾಳು ಸಚ್ಚಿದಾನಂದ, ಪಿ ಹಳ್ಳಿ ರಮೇಶ್ ಸೇರಿದಂತೆ ಮತ್ತಿತರರಿದ್ದರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!