Saturday, May 18, 2024

ಪ್ರಾಯೋಗಿಕ ಆವೃತ್ತಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರವಾಸ

‍ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನ.4ರಂದು ಶ್ರೀರಂಗಪಟ್ಟಣ ಹಾಗೂ ಮಂಡ್ಯ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸಕೈಗೊಳ್ಳಲಿದ್ದಾರೆಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30ಗಂಟೆಗೆ ಶ್ರೀರಂಗಪಟ್ಟಣದಲ್ಲಿ ನಡೆಯುವ ಎಸ್.ಸಿ., ಎಸ್.ಟಿ. ವರ್ಗದ ಪ್ರಮುಖರ ಜೊತೆ ಸಂವಾದ ನಡೆಸುವರು. ಬೆಳಿಗ್ಗೆ 10.30 ಕ್ಕೆ ಶ್ರೀರಂಗಪಟ್ಟಣ ಬೂತ್ ಅಧ್ಯಕ್ಷರು ಹಾಗೂ ಬಿ.ಎಲ್.ಎ-2 ಸಭೆ, ಬೆಳಿಗ್ಗೆ 11.45ಕ್ಕೆ ಶ್ರೀರಂಗಪಟ್ಟಣ ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಭಾಗವಹಿಸುವರು ಎಂದರು.

ಮಧ್ಯಾಹ್ನ 3 ಗಂಟೆಗೆ ಮಂಡ್ಯ ಬೂತ್ ಅಧ್ಯಕ್ಷರು ಹಾಗೂ ಬಿ.ಎಲ್.ಎ-2ಗಳ ಸಭೆಯಲ್ಲಿ ಭಾಗವಹಿಸಲಿದ್ದು, ಸಂಜೆ 4 ಗಂಟೆಗೆ ಮಂಡ್ಯ ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಭಾಗವಹಿಸಲಿದ್ದು, ಸಂಜೆ 5.30ಕ್ಕೆ ಫಲಾನುಭವಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆಂದು ಹೇಳಿದರು.

ನಿಷ್ಠ ಕಾರ್ಯಕರ್ತರಿಗೆ ಟಿಕೆಟ್ 

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ  ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಪಕ್ಷದ ವರಿಷ್ಠರು ಟಿಕೆಟ್ ನೀಡಲಿದ್ದಾರೆಂದು ಸಿ.ಪಿ.ಉಮೇಶ್ ತಿಳಿಸಿದರು. ಟಿಕೆಟ್ ಯಾರಿಗೆ ಎನ್ನುವ ಬಗ್ಗೆ ಇನ್ನೂ ಅಂತಿಮವಾಗಿಲ್ಲ, ಎಲ್ಲಾ ವಿಧಾನ ಸಭಾಕ್ಷೇತ್ರಗಳಲ್ಲೂ ಟಿಕೆಟ್ ಆಕಾಂಕ್ಷಿಗಳಿದ್ದು, ಪ್ರಾಮಾಣಿಕರನ್ನು ಗುರುತಿಸಿ ಪಕ್ಷದ ಟಿಕೆಟ್ ನೀಡಲಿದೆ ಎಂದರು.

ಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಸಿದ್ದರಾಮಯ್ಯ, ವಿವೇಕ್, ಲಿಂಗರಾಜು, ಸಿ.ಟಿ.ಮಂಜುನಾಥ್, ಅಂಕಪ್ಪ, ವಸಂತಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

 

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!