ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ಬಿಹಾರ ಮೂಲದ ರಾಕೇಶ್ (22) ಎಂಬ ಕಾರ್ಮಿಕ ಸಾವಿಗೀಡಾಗಿರುವ ದುರ್ಘಟನೆ ನಡೆದಿದೆ.
ಇತ್ತೀಚೆಗೆ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದ ರಾಕೇಶ್, ನಿನ್ನೆ ನೈಟ್ ಶಿಫ್ಟ್ ಕೆಲಸಕ್ಕೆ ಹಾಜರಾಗಿದ್ದರು, ಇಂದು ಬೆಳಿಗ್ಗೆ 7.30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಬೂದಿ ತೆಗೆಯುವ ಮಷಿನ್ ಬೆಲ್ಟ್ಗೆ ಸಿಲುಕಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ತಕ್ಷಣವೇ ಅವರನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತಾದರು. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು.