ಮಂಡ್ಯ ತಾಲೂಕು ಲೋಕಸರ ಗ್ರಾಮದಲ್ಲಿ ಇಂದು ಮುಂಜಾನೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.
ಇತ್ತೀಚಿಗೆ ಲೋಕಸರ ಹಾಗೂ ಅಕ್ಕಪಕ್ಕದ ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಚಿರತೆ ಜನರಲ್ಲಿ ಆತಂಕ ಮೂಡಿಸಿತ್ತು.ಜನರು ಮನೆಯಿಂದ ಹೊರಗೆ ಬರಲು ಭಯಪಡುತ್ತಿದ್ದರು.ರಾತ್ರಿಯಾದರೆ ಸಾಕು ಜನರು ಬೇಗವಮನೆಗೆ ಸೇರಿಕೊಳ್ಳುತ್ತಿದ್ದರು.
ಒಂದಷ್ಟು ಸಾಕು ಪ್ರಾಣಿಗಳನ್ನು ಬಲಿ ಪಡೆದಿದ್ದ ಚಿರತೆ ಸೆರೆಗೆ ಜನರ ಒತ್ತಾಯ ಹೆಚ್ಚಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಬೋನು ಇರಿಸಿತ್ತು.ಇಂದು ಮುಂಜಾನೆ ಚಿರತೆ ಬೋನಿಗೆ ಬಿದ್ದಿದ್ದು,ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.