ಮಂಡ್ಯ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಪಿ.ಪ್ರಕಾಶ್ ಅವರು ಆಯ್ಕೆಯಾದರು.
ಮಂಡ್ಯ ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಎಲ್ಲರ ಒಮ್ಮತದ ಮೇರೆಗೆ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ನಂತರ ರಾಷ್ಟ್ರೀಯ ಮಂಡಳಿ ಸದಸ್ಯರನ್ನಾಗಿ ಜೆ.ಎಂ.ಬಾಲಕೃಷ್ಣ, ನಾಮ ನಿರ್ದೇಶನ ಸದಸ್ಯರಾಗಿ ಚಿನಕುರಳಿ ಲೋಕೇಶ್, ಮಧು, ಬಾಲಕೃಷ್ಣ, ಶಿವಪ್ರಕಾಶ್, ಅಶ್ವಥ್, ವೆಂಕಟರಾಮು ಅವರನ್ನು ಆಯ್ಕೆ ಮಾಡಲಾಯಿತು.
ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಬಿ.ಪಿ.ಪ್ರಕಾಶ್ ಹಾಗೂ ನಾಮ ನಿರ್ದೇಶಕರನ್ನು ರಾಜ್ಯ ಸಂಘದ ಕಾರ್ಯದರ್ಶಿಗಳಾದ ಮತ್ತೀಕೆರೆ ಜಯರಾಂ, ಸೋಮಶೇಖರ್ ಕೆರಗೋಡು, ಮಾಜಿ ಅಧ್ಯಕ್ಷ ಕೆ.ಸಿ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ನವೀನ್ಕುಮಾರ್, ಉಪಾಧ್ಯಕ್ಷರಾದ ರವಿಸಾವಂದಿಪುರ, ಗಣಂಗೂರು ನಂಜೇಗೌಡ, ಖಜಾಂಚಿ ನಂಜುಂಡಸ್ವಾಮಿ, ಕಾರ್ಯದರ್ಶಿಗಳಾದ ಮಂಜುಳಾ ಕಿರುಗಾವಲು, ಬಿ.ಎಸ್.ಜಯರಾಂ ಸೇರಿದಂತೆ ಮತ್ತಿತರರು ಅಭಿನಂದಿಸಿದರು.