Thursday, September 19, 2024

ಪ್ರಾಯೋಗಿಕ ಆವೃತ್ತಿ

ನಿಖಿಲ್ ಕುಮಾರಸ್ವಾಮಿ ಜನರ ಕಣ್ಮಣಿಯಾಗಿ ಬೆಳೆಯಲಿ : ಬಿ.ಆರ್.ರಾಮಚಂದ್ರು

ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೊಸ ಹೊಸ ಸೇವಾ ಕಾರ್ಯಗಳ ಮೂಲಕ ಜನರ ಕಣ್ಮಣಿಯಾಗಿ ಬೆಳೆಯಲಿ ಎಂದು ಮನ್ ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು ಶುಭ ಕೋರಿದರು.

ನಿಖಿಲ್ ಕುಮಾರಸ್ವಾಮಿ ಅವರ 35ನೇ ಜನ್ಮದಿನದ ಅಂಗವಾಗಿ ರಾಮಚಂದ್ರು ಅವರು ತಮ್ಮ ನೂರಾರು ಬೆಂಬಲಿಗರೊಂದಿಗೆ ಬಿಡದಿಗೆ ತೆರಳಿ ಜನ್ಮದಿನ ಆಚರಿಸಿ ಶುಭಾಶಯ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ ಅವರು ಸಿನಿಮಾ ಮತ್ತು ರಾಜಕೀಯ ಎರಡೂ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದಾರೆ. ಇದೀಗ ಅವರ 35ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಹೊಸ ಹೊಸ ಸೇವಾಕಾರ್ಯಗಳನ್ನು ರೂಪಿಸಲು ಸಂಕಲ್ಪ ಮಾಡಿದ್ದಾರೆ.ಇಂತಹ ಯುವನಾಯಕ ಜನರ ಕಣ್ಮಣಿಯಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.

ಸ್ಯಾಂಡಲ್‌ವುಡ್ ನ ಯುವರಾಜ ಎಂದೇ ಅಭಿಮಾನಿಗಳ ಗೌರವಕ್ಕೆ ಪಾತ್ರರಾಗಿರುವ ನಾಯಕ ನಟ ನಿಖಿಲ್‌ ಕುಮಾರಸ್ವಾಮಿ ಅವರ ಜನ್ಮದಿನವಾದ ಇಂದು ನಾವು ಅವರ ಆಯುರಾರೋಗ್ಯ, ರಾಜಕೀಯ ಭವಿಷ್ಯ ಉಜ್ವಲಕ್ಕಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇವೆ. ನಿಖಿಲ್ ಕುಮಾರಸ್ವಾಮಿ ಅವರು ರಾಮನಗರ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದು, ಅವರ ಗೆಲುವಿಗೆ ನಮ್ಮ ಅಭಿಮಾನಿಗಳು ದುಡಿಯಲಿದ್ದಾರೆ. ಅವರು ಗೆದ್ದು ರಾಮನಗರ ಕ್ಷೇತ್ರವನ್ನು ಅಭಿವೃದ್ಧಿ ಮಾಡಲಿದ್ದು, ಕ್ಷೇತ್ರದ ಜನತೆ ಇವರನ್ನು ಅತಿ ಹೆಚ್ಚಿನ ಬಹುಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಜಾ.ದಳ ಅಧ್ಯಕ್ಷ ಡಿ.ರಮೇಶ್, ಶಂಭು ಸೇವಾ ಟ್ರಸ್ಟ್ ಕಾರ್ಯದರ್ಶಿ ಬಿ‌.ಆರ್.ಸುರೇಶ್, ರಾಜಶೇಖರ್ ಸೇರಿದಂತೆ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!