Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸಿ : ಆರ್. ಧರ್ಮಸೇನಾ

”ಕಾಂಗ್ರೆಸ್ ನಡಿಗೆ ದಲಿತರ ಕಡೆಗೆ” ಎಂಬ ಕಾರ್ಯಕ್ರಮ ರೂಪಿಸಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಲಿತರ ಮೇಲಾಗುತ್ತಿರುವ ದೌರ್ಜನ್ಯಗಳನ್ನು ಮನವರಿಗೆ ಮಾಡಿಕೊಟ್ಟು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ಅಧಿಕಾರಕ್ಕೆ ತರಲು ಶ್ರಮಿಸಬೇಕೆಂದು ಕೆಪಿಸಿಸಿ ಪರಿಶಿಷ್ಟ ವಿಭಾಗದ ರಾಜ್ಯಾಧ್ಯಕ್ಷ ಆರ್. ಧರ್ಮಸೇನಾ ಹೇಳಿದರು.

ಮೈಸೂರಿನಿಂದ ಬೆಂಗಳೂರಿಗೆ ಹೋಗುವ ಮಾರ್ಗ ಮಧ್ಯೆ ಮಂಡ್ಯ ನಗರದಲ್ಲಿ ಮಾತನಾಡಿದ ಅವರು, ದಲಿತ  ಸಮುದಾಯದ ನಾಯಕರು ಪ್ರತಿಯೊಂದು ಹಳ್ಳಿಗಳಿಗೂ ಭೇಟಿಕೊಟ್ಟು, ಸಮುದಾಯದ ಮೇಲೆ ಹಾಗುತ್ತಿರುವ ದೌರ್ಜನ್ಯ, ದಬ್ಬಾಳಿಕೆ, ಅನ್ಯಾಯಗಳನ್ನು ಜನರಿಗೆ ತಿಳಿಸಬೇಕೆಂದರು.

ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿದ್ದಾರೆ, ಈ ಸಂದರ್ಭದಲ್ಲಿ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವ ಮುಖಾಂತರ ಅವರಿಗೆ ಗೌರವ ಸಲ್ಲಿಸಬೇಕು. ಚುನಾವಣೆ ಹತ್ತಿರ ಬರುತ್ತಿದೆ, ಜಿಲ್ಲೆಯ ಎಲ್ಲಾ ನಾಯಕರು ಒಗ್ಗೂಡಿ ಕೆಲಸ ಮಾಡಬೇಕು. ಈ ಸಲ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ತರುವ ಸಲುವಾಗಿ ಎಲ್ಲಾ ಪರಿಶಿಷ್ಟ ಸಮುದಾಯದ ನಾಯಕರು ಕಾರ್ಯಕರ್ತರು ಶ್ರಮಿಸಬೇಕು ಎಂದರು.

ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿಯ ಮುಖಂಡರಾದ ವಿಜಯಲಕ್ಷ್ಮಿ ರಘುನಂದನ್, ಕೆ.ಹೆಚ್.ಲವ, ಕೆ.ಎಸ್. ದೀಪಕ್, ಶಶಿಕಲಾ ರಾಮಣ್ಣ, ರಾಮಶೆಟ್ರು, ಕೊಮ್ಮೇರಹಳ್ಳಿ ಕೃಷ್ಣ, ಸುಂಡಹಳ್ಳಿ ಸಿದ್ದರಾಜು, ಬೇಲೂರು ಸ್ವಾಮಿ, ಕೃಷ್ಣಪ್ಪ, ಗುತ್ತಲು ಶಿವು ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!