ಮಂಡ್ಯ ವಿಧಾನಸಭಾ ಕ್ಷೇತ್ರದ ಬಿಳಿದೇಗಲು ಗ್ರಾಮದ ಶ್ರೀ ವೆಂಕಟರಮಣ ದೇವಸ್ಥಾನದ ಪುನರ್ ನಿರ್ಮಾಣ, ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಜೆಡಿಎಸ್ ಯುವನಾಯಕ ಮತ್ತು ಮನ್ಮುಲ್ ಅಧ್ಯಕ್ಷ ಬಿ.ಆರ್. ರಾಮಚಂದ್ರುರವರು ಗುದ್ದಲಿ ಪೂಜೆ ನೆರವೇರಿಸಿ ಶ್ರೀ ವೆಂಕಟರಮಣ ದೇವಸ್ಥಾನ ಜೀರ್ಣೋದ್ಧಾರಕ್ಕಾಗಿ 1,00,000 ರೂ.(ಒಂದು ಲಕ್ಷ) ಗಳನ್ನು ಸಮಿತಿಗೆ ದೇಣಿಗೆಯಾಗಿ ನೀಡಿದರು.
ನಂತರ ಮಾತನಾಡಿದ ಅವರು,ದೇವಾಲಯಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದೆ.ದೇವಾಲಯಗಳಿಗೆ ಬರುವ ಮನುಷ್ಯ ದೇವರ ಕಂಡು ನೆಮ್ಮದಿ ಪಡೆಯುತ್ತಾನೆ.ದೇವರ ಕಾರ್ಯಗಳಿಗೆ ನಾನು ಕೈಲಾದ ಮಟ್ಟಿಗೆ ಧನ ಸಹಾಯ ಮಾಡುತ್ತಿದ್ದೇನೆ ಎಂದರು.