ಮಂಡ್ಯ ತಾಲ್ಲೂಕಿನ ಬೂದನೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಮಾನಸ ಹಾಗೂ ಕಾಂಗ್ರೆಸ್ ಬೆಂಬಲಿತ ಜಯಲಕ್ಷ್ಮಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಒಟ್ಟು18 ಮಂದಿ ಸದಸ್ಯ ಬಲದ ಗ್ರಾಪಂನಲ್ಲಿ ಚುನಾವಣೆಗೆ ಇಬ್ ರು ಸದಸ್ಯರು ಗೈರು ಹಾಜರಾಗಿದ್ದರು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಮಾನಸ 12 ಮತ ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರು. ಪ್ರತಿಸ್ಪರ್ಧಿ ಶಿಲ್ಪ 4 ಮತ ಪಡೆದರೆ ಪರಾಭವಗೊಂಡರು.
ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜಯಲಕ್ಷ್ಮಿ 12 ಮತ ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾದರು. ಸೌಭಾಗ್ಯಮ್ಮ 4 ಮತ ಸೋಲನ್ನಪ್ಪಿದರು. ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಬೂದನೂರು ನಾಗರಿಕ ಬಳಗ ಅಭಿನಂದಿಸಿದೆ.
ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶಶಿಧರ್, ಪಿಡಿಒ ವಿನಯ್ ಕುಮಾರ್ ಕಾರ್ಯ ನಿರ್ವಹಿಸಿದರು.