Saturday, May 18, 2024

ಪ್ರಾಯೋಗಿಕ ಆವೃತ್ತಿ

ಎಸ್‌ಟಿಜಿ ಗ್ರೂಪ್ ವತಿಯಿಂದ ಕ್ಷಯ ರೋಗಿಗಳಿಗೆ ಆಹಾರ ಕಿಟ್‌ ವಿತರಣೆ

ಕ್ಷಯರೋಗ ಪೀಡಿತರಿಗೆ ಶಾಸಕ ಸಿ.ಎಸ್.ಪುಟ್ಟರಾಜು ಅವರ ಮಾಲೀಕತ್ವದ ಎಸ್‌ಟಿಜಿ ಗ್ರೂಪ್ ವತಿಯಿಂದ ನೀಡಲಾಗುತ್ತಿರುವ ಆಹಾರ ಕಿಟ್‌ಗಳನ್ನು ಚಿನಕುರಳಿ ಗ್ರಾಪಂ ಅಧ್ಯಕ್ಷ ಪಾಪಣ್ಣ(ಪುಟ್ಟಸ್ವಾಮಿ) ಅವರು ವಿತರಣೆ ಮಾಡಿದರು.

ತಾಲೂಕಿನ ಚಿನಕುರಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಪ್ರಧಾನ ಮಂತ್ರಿ ಅವರ ಕ್ಷಯ ಮುಕ್ತ ಭಾರತ  ಕಾರ್ಯಕ್ರಮದಡಿ  ಆಹಾರ ಕಿಟ್ ವಿತರಣೆ  ಮಾಡಿದರು.

ಬಳಿಕ ಮಾತನಾಡಿದ ಅವರು, ಶಾಸಕ ಸಿ.ಎಸ್.ಪುಟ್ಟರಾಜು ಅವರ ಮಾಲೀಕತ್ವದ ಎಸ್‌ಟಿಜಿ ಗ್ರೂಪ್‌ ವತಿಯಿಂದ ಪಾಂಡವಪುರ ತಾಲೂಕಿನಾದ್ಯಂತ ಇರುವ ಎಲ್ಲಾ ಕ್ಷಯ ಮುಕ್ತ ರೋಗಿಗಳಿಗೆ ಅವರು ಗುಣಮುಖರಾಗುವವರೆಗೂ ಸಹ ಆರೋಗ್ಯ ಕಿಟ್ ವಿತರಣೆ ಮಾಡಲು ತೀರ್ಮಾನಿಸಿ ಆಹಾರ ಕಿಟ್ ವಿತರಣೆ ಮಾಡಲಾಗುತ್ತಿದೆ. ಅದರಂತೆ ಚಿನಕುರಳಿಯ ಸಮುದಾಯ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಸುಮಾರು 9 ಮಂದಿ ಕ್ಷಯರೋಗ ಪೀಡಿತ ರೋಗಿಗಳಿಗೆ ಆಹಾರ ಕಿಟ್ ವಿತರಣೆ ಮಾಡಲಾಗಿದೆ.

ಉಳಿದಂತೆ ಆಯಾ ವ್ಯಾಪ್ತಿಯ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳ ಮೂಲಕ ಆಹಾರ ಕಿಟ್‌ಗಳನ್ನು ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಸಮಾರಂಭದಲ್ಲಿ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಸಿ.ಪ್ರಕಾಶ್, ಗ್ರಾಪಂ ಸದಸ್ಯ ಶ್ರೀನಿವಾಸ್, ಮಾಜಿ ಸದಸ್ಯ ಸಿ.ಡಿ. ಮಹದೇವು, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಆಶಾಲತಾ, ತಾಲೂಕು ಆರೋಗ್ಯಾಧಿಕಾರಿ ಡಾ.ಸಿ.ಎ.ಅರವಿಂದ್, ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾ ವೈದ್ಯಾಧಿಕಾರಿ ಡಾ.ಸಂದೀಪ್, ವೈದ್ಯರಾದ ಡಾ.ಮುರಳಿ, ಡಾ.ಪ್ರಮಿಳ, ಡಾ.ಶ್ವೇತ, ಡಾ.ಮಂಜುಶ್ರೀ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!