Thursday, September 19, 2024

ಪ್ರಾಯೋಗಿಕ ಆವೃತ್ತಿ

ಸಿ.ಗೌರಮ್ಮಚಿಕ್ಕಣ್ಣ ಸಮಾಜ ಸೇವಾ ಪ್ರಶಸ್ತಿ ಪ್ರದಾನ

ಮಂಡ್ಯ ನಗರದ ಕರ್ನಾಟಕ ಸಂಘದ ಆವರಣದ ಕುವೆಂಪು ಬಯಲು ರಂಗಮಂದಿರದಲ್ಲಿ ಅ.24ರಂದು ಬೆಳಿಗ್ಗೆ 11 ಗಂಟೆಗೆ ಸಿ.ಗೌರಮ್ಮಚಿಕ್ಕಣ ಸಮಾಜ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಎಂ.ಶ್ರೀನಿವಾಸ್  ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಮ್ ರಾಯಪುರ ಅವರು ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿ  ಡಾ.ಹೆಚ್.ಎಲ್.ನಾಗರಾಜು ಅವರಿಗೆ ಈ ಭಾರಿಯ ಪ್ರಶಸ್ತಿ ಪ್ರದಾನ ಮಾಡುವರು, ಈ ಪ್ರಶಸ್ತಿಯು 25 ಸಾವಿರ ನಗದು, ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ಒಳಗೊಂಡಿದೆ ಎಂದರು.

ರೈತ ಮುಖಂಡ ಕೆ.ಆರ್.ಜಯರಾಮು ಅಭಿನಂದನಾ ನುಡಿ ನುಡಿಯುವರು. ಮುಖ್ಯ ಅತಿಥಿಗಳಾಗಿ ಶಾಸಕ ಮಧು ಜಿ.ಮಾದೇಗೌಡ,  ಮಾಜಿ ಶಾಸಕರಾದ ಬಿ.ರಾಮಕೃಷ್ಣ,ಕೆ.ಟಿ.ಶ್ರೀಕಂಠೇಗೌಡ, ಹೆಚ್.ಹೊನ್ನಪ್ಪ, ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಐಟಿ, ಬಿಟಿ ಹಾಗೂ ಸೈನ್ಸ್ ಟೆಕ್ನಾಲಜಿಸ್ ನಿರ್ದೇಶಕ ಎ.ಬಿ.ಬಸವರಾಜು, ಉಪವಿಭಾಗಾಧಿಕಾರಿ ಐಶ್ವರ್ಯ, ಎಸ್.ಶಂಭೂಗೌಡ, ಕೆ.ನಾಗೇಶ್ ಭಾಗವಹಿಸುವರು ಎಂದರು.

ಮುಖಂಡರಾದ ಚಿಕ್ಕಣ, ಸಿ.ಕೃಷ್ಣೇಗೌಡ, ಸಿ.ಚೌಡಯ್ಯ, ಎಂ.ಪುಟ್ಟಸ್ವಾಮಿ ಹಾಗೂ ವೈ.ಸಿ.ಚನ್ನಪ್ಪ ಉಪಸ್ಥಿತರಿರುವರು ಎಂದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!