Friday, September 20, 2024

ಪ್ರಾಯೋಗಿಕ ಆವೃತ್ತಿ

ಶಾಸಕ ರವಿಕುಮಾರ್ ವಿರುದ್ದ ಮಾನನಷ್ಟ ಮೊಕದ್ದಮೆ: ಸಿ.ಎಸ್. ಪುಟ್ಟರಾಜು

ರಾಜ್ಯಸಭಾ ಚುನಾವಣೆ ವಿಚಾರದಲ್ಲಿ ಕಾಂಗ್ರೆಸ್ ಶಾಸಕರಿಗೆ ಜೆಡಿಎಸ್ ನಾಯಕರು ಬೆದರಿಕೆ ಹಾಕಿದ್ಧಾರೆಂದು ಹೇಳಿಕೆ ನೀಡಿರುವ ಮಂಡ್ಯ ಶಾಸಕ ರವಿಕುಮಾರ್ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.

ಕೆ.ಆರ್.ಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಆತ ಇದ್ದಾರಲ್ಲ ಮಂಡ್ಯ ಶಾಸಕ, ಆತನಿಗೆ ಶಾಸಕ ಸ್ಥಾನ ಸಿಕ್ಕಿರೋದು ಪೂರ್ವ ಜನ್ಮದ ಪುಣ್ಯ. ಅದನ್ನ ಹೆಂಗೆ ಉಳಿಸಿಕೊಂಡು ಕೇಮೇ ಮಾಡಬೇಕು ಅದನ್ನ ಮಾಡೋದನ್ನ ಕಲೀಲಿ” ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

ಈ ತರಹದ ಲಘುವಾದ ಮಾತುಗಳು ಆರೋಪಗಳನ್ನು ಮಾಡೋದನ್ನ ಬಿಡಲಿ. ಇಂತಹ ವೈಜ್ಞಾನಿಕ ಜಗತ್ತಿನಲ್ಲಿ ಎಲ್ಲದಕ್ಕೂ ಸಾಕ್ಷಿ ಇರಬೇಕಲ್ಲ. ಈ ಆರೋಪಕ್ಕೆ ಆತ ಎಷ್ಟು ಕೋಟಿಗೆ ಮಾನನಷ್ಟ ಎದುರಿಸಬೇಕಾತ್ತದೆ, ಅನ್ನೋದನ್ನ ತೋರೀಸ್ತಿನಿ. ಇನ್ನೆರಡು ದಿನದಲ್ಲಿ ಆತನ ವಿರುದ್ದ ಡೆಫರ್ಮೇಶನ್ ಕೇಸ್ ದಾಖಲಿಸ್ತೀನಿ ಎಂದು ಹೇಳಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!