ಬೆಂಗಳೂರು-ಮೈಸೂರು ಹೆದ್ದಾರಿಗಾಗಿ ಅಕ್ಕಪಕ್ಕದ ಹಳ್ಳಿಗಳ ಜನರಿಗೆ ಅನಾನುಕೂಲ ಮಾಡಿದರೆ ಶ್ರೇಯಸ್ಸಲ್ಲ. ಶಾಸಕ ಸಿ.ಎಸ್.ಪುಟ್ಟರಾಜು ಮಾತಿನಂತೆ ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ಹಾಳಾಗಿರುವ ರಸ್ತೆ ಕಾಮಗಾರಿ ಮಾಡಿಸುವೆ ಎಂದು ಸಂಸದ ಪ್ರತಾಪಸಿಂಹ ತಿಳಿಸಿದರು.
ಮಂಡ್ಯದ ಹೊರವಲಯದ ವಿ.ಸಿ.ಫಾರಂ ಗೇಟ್ ಬಳಿ ಶಾಸಕ ಸಿ.ಎಸ್.ಪುಟ್ಟರಾಜು ಅವರ ಜೊತೆ ಹಾಳಾದ ರಸ್ತೆಗಳ ಬಗ್ಗೆ ಚರ್ಚೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣಕ್ಕೆ ಪಾಂಡವಪುರ ತಾಲ್ಲೂಕಿನಲ್ಲಿ ಕಲ್ಲು, ಮಣ್ಣು ತೆಗೆದುಕೊಂಡು ದಿಲೀಪ್ ಬಿಲ್ಡ್ಕಾನ್ ಕಂಪನಿಯ ಲಾರಿಗಳು ಓಡಾಡಿದ್ದರಿಂದ ರಸ್ತೆಗಳಲ್ಲಿ ಗುಂಡಿಬಿದ್ದು ಹಾಳಾಗಿರುವುದು ನಿಜ.ದ್ವಿಚಕ್ರ ವಾಹನಗಳು ಸಂಚರಿಸಲು ಆಗದಷ್ಟು ರಸ್ತೆಗಳು ಹಾಳಾಗಿದೆ.
ಈ ಹಿನ್ನಲೆಯಲ್ಲಿ ಪುಟ್ಟರಾಜು ಅವರು ಹೇಳಿದ ಪ್ರಕಾರ ರಸ್ತೆ ಪರಿಶೀಲನೆ ಮಾಡಿದ್ದೇನೆ. ಸಂಪೂರ್ಣವಾಗಿ ಸಿಎಂ ಜೊತೆ ಚರ್ಚಿಸಿ ರಸ್ತೆ ಸರಿಪಡಿಸುವ ಕೆಲಸವನ್ನು ಮಾಡುತ್ತೇವೆ ಎಂದರು.
ಹಾಳಾಗಿರುವ ರಸ್ತೆಗಳ ಬಗ್ಗೆ ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ಇಲಾಖೆ ಅಧಿಕಾರಿಗಳಿಗೆ ಒಂದು ವರದಿ ನೀಡುವಂತೆ ಹೇಳಿದ್ದೇನೆ.ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ,ಆದಷ್ಟು ಬೇಗ ರಸ್ತೆ ಕೆಲಸ ಮಾಡಿಸುವೆ ಎಂದರು.