ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರ ಬಗ್ಗೆ ಬಿ.ಜೆ.ಪಿ. ನಾಯಕ ಸಿ.ಟಿ.ರವಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಉಪಾಧ್ಯಕ್ಷ ಎಂ.ಎಲ್.ಸುರೇಶ್ ತೀವ್ರವಾಗಿ ಖಂಡಿಸಿದ್ದಾರೆ.
ವೈಯಕ್ತಿಕ ಟೀಕೆ ಮಾಡುವುದು ಬಿಜೆಪಿ ನಾಯಕರ ಸಂಸ್ಕೃತಿಯನ್ನು ತೋರಿಸುತ್ತದೆ. ಇದೇ ರೀತಿ ವೈಯಕ್ತಿಕ ನಿಂದನೆಯನ್ನು ಮುಂದುವರೆಸಿದರೆ ಪಕ್ಷದ ವತಿಯಿಂದ ಉಗ್ರವಾಗಿ ಪ್ರತಿಭಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕ ಜೀವನದಲ್ಲಿರುವವರು ಮಾತಿನಲ್ಲಿ ಹಿಡಿತವಿಟ್ಟುಕೊಳ್ಳಬೇಕು. ವಿಶ್ವನಾಥ್ರವರ ರಕ್ತ ಮತ್ತು ಸಿದ್ಧರಾಮಯ್ಯರವರ ರಕ್ತ ಇಬ್ಬರದೂ ಒಂದೇ ರಕ್ತ ಎಂದು ಹೇಳಿರುವುದು ಖಂಡನೀಯ ಎಂದಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಈ ರೀತಿ ಹೇಳಿಕೆ ನೀಡಲು ಅವರಿಗೆ ನಾಚಿಕೆಯಾಗಬೇಕು, ಕೂಡಲೇ ಅವರನ್ನು ಅವರ ಸ್ಥಾನದಿಂದ ವಜಾ ಮಾಡಬೇಕೆಂದು ಸುರೇಶ್ ಒತ್ತಾಯಿಸಿದ್ದಾರೆ.