Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಕ್ಯಾಂಟರ್ ಪಲ್ಟಿ ಹೊಡೆದು 30 ಜನ ಗಂಭೀರ ಗಾಯ

ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದ ವೇಳೆ ಕ್ಯಾಂಟರ್ ಪಲ್ಟಿ ಹೊಡೆದು 30 ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿರುವ ಮಳವಳ್ಳಿ ತಾಲ್ಲೂಕಿನ ಬಸವನಬೆಟ್ಟದ ಬಳಿ ನಡೆದಿದೆ.

ಮಳವಳ್ಳಿ ತಾಲ್ಲೂಕು ತಮ್ಮಡಹಳ್ಳಿ ಗ್ರಾಮದಿಂದ ಬಸವನಬೆಟ್ಟದ ದೇವಸ್ಥಾನಕ್ಕೆ ಹೋಗಿದ್ದು ಪೂಜೆ ಹಾಗೂ ಊಟ ಮುಗಿಸಿಕೊಂಡ ವಾಪಸ್ಸು ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಹಲಗೂರು ಪೊಲೀಸರು ಭೇಟಿನೀಡಿ ತಕ್ಷಣ ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ವತ್ರೆಗೆ ಸಾಗಿಸಲಾಯಿತು.

ಶಾಸಕ ನರೇಂದ್ರ ಸ್ವಾಮಿ ಭೇಟಿ
ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಬೆಂಗಳೂರಿನಿಂದ ಆಗಮಿಸಿದ ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಗಾಯಗೊಂಡ ಜನರ ಆರೋಗ್ಯ ವಿಚಾರಿಸಿ,ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಜಿಲ್ಲಾಸ್ಪತ್ರೆಯ ವೈದ್ಯರಿಗೆ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಿದರು.

ಆಸ್ಪತ್ರೆಗೆ ಆಡಿಷನಲ್ ಎಸ್ಪಿ ತಿಮ್ಮಯ್ಯ, ಮಂಡ್ಯ ಉಪ ವಿಭಾಗಾಧಿಕಾರಿ ಸಿ. ಶಿವಮೂರ್ತಿ, ತಹಶೀಲ್ದಾರ್ ಲೋಕೇಶ್. ಡಿ.ವೈ ಎಸ್. ಪಿ ನವೀನ್ ಕುಮಾರ್ ಸೇರಿದಂತೆ ಹಲವರು ಆಸ್ಪತ್ರೆಗೆ ಭೇಟಿ ಗಾಯಾಳುಗಳಿಗಳಿಗೆ ಸಾಂತ್ವನ ಹೇಳಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!