ಎಲ್ಲಾ ರೀತಿ ಮಾಹಿತಿ ಪಡೆದು ಯುವ ನಾಯಕ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿರುವುದು ಸಂತಸ ತಂದಿದೆ ಎಂದು ಬಿಜೆಪಿ ಮುಖಂಡ ಯಮದೂರು ಸಿದ್ದರಾಜು ತಿಳಿಸಿದರು.
ಮಳವಳ್ಳಿ ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಸಂಭ್ರಮಾಚರಣೆ ನಡೆಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಗುರಿ ಇಟ್ಟುಕೊಂಡು ಅಂತಿಮವಾಗಿ ಸಂಘಟನಾ ಸಾಮರ್ಥ್ಯ ಇರುವ ಯುವ ನಾಯಕ ಮತ್ತು ಲಿಂಗಾಯಿತ ಸಮುದಾಯ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದು ಬಿಜೆಪಿ ಕಾರ್ಯಕರ್ತರಿಗೆ ಸಂತಸ ತಂದಿದೆ. ಈ ಬಾರಿ ಲೋಕಸಭೆಯ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸದಸ್ಯರರನ್ನು ಆಯ್ಕೆ ಮಾಡುವ ಶಕ್ತಿ ಅವರಲ್ಲಿದೆ ಎಂದರು. ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಮತ್ತು ಸಿಹಿಯನ್ನು ಹಂಚಿ ಸಂಭ್ರಮಾಚರಣೆಯನ್ನು ನಡೆಸಿದರು.
ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಕೃಷ್ಣ, ಪುರಸಭೆ ಸದಸ್ಯ ರವಿ, ಯುವ ಮೋರ್ಚಾ ಅಧ್ಯಕ್ಷ ಮೋಹನ್ ಕುಮಾರ್, ಮುಖಂಡರಾದ ಬಸವರಾಜು, ಅಶೋಕ್, ಅಪ್ಪಾಜಿಗೌಡ, ನಾಗೇಗೌಡ, ಕಪನಿಗೌಡ, ಹರೀಶ್ ಸೇರಿದಂತೆ ಇತರರಿದ್ದರು.