Thursday, September 19, 2024

ಪ್ರಾಯೋಗಿಕ ಆವೃತ್ತಿ

ವಿದ್ಯಾರ್ಥಿನಿಲಯಕ್ಕೆ ಸಿಇಓ ತನ್ವೀರ್ ಆಸೀಫ್ ಭೇಟಿ: ಪರಿಶೀಲನೆ

ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಅವರು  ಗುರುವಾರ ಮಂಡ್ಯನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೂಲಸೌಲಭ್ಯ ಯೋಜನೆಯಡಿ ಒದಗಿಸುವ ಶುದ್ಧ ನೀರಿನ ಮಷಿನ್ ಅನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳ ನಿಲಯದ ಕೊಠಡಿಗಳ ವೀಕ್ಷಣೆ, ದಾಸ್ತಾನು ಕೊಠಡಿ, ಅಡುಗೆ ಮನೆಯ ಶುಚಿತ್ವ ಪರಿಶೀಲಿಸಿದರು ಹಾಗೂ ವಿದ್ಯಾರ್ಥಿಗಳ ಜೊತೆಯಲ್ಲಿ ಭೋಜನ ಸವಿಯುವುದರ ಮೂಲಕ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು.

ದಾಸ್ತಾನು ಕೊಠಡಿಗೆ ಭೇಟಿ ನೀಡಿ ವಿದ್ಯಾರ್ಥಿ ನಿಲಯಗಳ ಸಾಮಗ್ರಿಗಳ ಗುಣಮಟ್ಟವನ್ನು ಪರಿಶೀಲಿಸಿದರು. ಹಾಗೂ ವಿದ್ಯಾರ್ಥಿಗಳೊಂದಿಗೆ ಬೆರೆತು ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆ ಬಗ್ಗೆ ಸಮಾಲೋಚನೆ ನಡೆಸಿದರು.

ಇದೇ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶ್ರೀನಿವಾಸ್ ಉಪಸ್ಥಿತರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!