ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ 62ನೇ ವರ್ಷದ ಜನ್ಮದಿನದ ಅಂಗವಾಗಿ ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ವಿವಿಧ ಸೇವಾ ಕಾರ್ಯಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.
ಇಂದು ಬೆಳಿಗ್ಗೆ ಮಂಡ್ಯ ನಗರದ ವಿದ್ಯಾ ಗಣಪತಿ ದೇವಾಲಯದಲ್ಲಿ ಚಲುವರಾಯಸ್ವಾಮಿ ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ಚಲುವರಾಯಸ್ವಾಮಿ ಅವರಿಗೆ ದೇವರು ಆಯಸ್ಸು, ಆರೋಗ್ಯ ನೀಡಿ ರಾಜ್ಯದ ಅಭಿವೃದ್ಧಿಗೆ ಮತ್ತಷ್ಟು ಸೇವೆ ಮಾಡಲು ಅವಕಾಶ ನೀಡುವಂತೆ ಪ್ರಾರ್ಥನೆ ಸಲ್ಲಿಸಿದರು.
ಮಂಡ್ಯದ ಸೇವಾ ಕಿರಣ ವೃದ್ಧಾಶ್ರಮದಲ್ಲಿ ವೃದ್ಧರಿಗೆ ಹೊದಿಕೆ ಹಾಗೂ ಬೆಳಗಿನ ಉಪಹಾರ ವಿತರಿಸಲಾಯಿತು.
ಮಂಡ್ಯ ನಗರದಲ್ಲಿರುವ ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್ ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿದರು.
ಮಂಡ್ಯದ ರೈತಸಭಾಂಗಣದ ಆವರಣದಲ್ಲಿರುವ ಸೊಸೈಟಿ ಬಳಿ ಎನ್.ಚಲುವರಾಯಸ್ವಾಮಿ ಹಿತೈಷಿಗಳ ಬಳಗ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಮಂಡ್ಯ ತಾ.ಪಂ.ಮಾಜಿ ಅಧ್ಯಕ್ಷ ತ್ಯಾಗರಾಜು ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರು ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಾಜಿ ಶಾಸಕ ಎಚ್.ಬಿ.ರಾಮು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು, ಕಂಬದಹಳ್ಳಿ ಪುಟ್ಟಸ್ವಾಮಿ, ಟಿ.ಕೆ.ರಾಮಲಿಂಗಯ್ಯ, ಅಂಜನಾ ಶ್ರೀಕಾಂತ್, ಶಶಿಧರ್, ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್, ವೀಣಾ ಶಂಕರ್, ಮುಖಂಡರಾದ ಕೆರಗೋಡು ಸೋಮಶೇಖರ್,ನಗರಸಭಾ ಸದಸ್ಯರಾದ ನಯೀಂ, ಶ್ರೀಧರ್, ಮುಖಂಡರಾದ ಬೇಲೂರು ಶಶಿಧರ್ ಸೇರಿದಂತೆ ಇತರರು ಭಾಗವಹಿಸಿದ್ದರು.