ರಾಜ್ಯ ಸರ್ಕಾರದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬದ ಪ್ರಯುಕ್ತ ಸಮಾಜ ಸೇವಕ ಕಾಂಗ್ರೆಸ್ ಮುಖಂಡ ಬೂಕನಕೆರೆ ವಿಜಯ ರಾಮೇಗೌಡ ಅಭಿಮಾನಿ ಬಳಗದ ವತಿಯಿಂದ ಮತ್ತು ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ತಾಲೂಕು ಆಸ್ಪತ್ರೆಯ ಹೊರರೋಗಿಗಳಿಗೆ ಹಣ್ಣು ಹಂಪಲು ನೀಡುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಮಾತನಾಡಿದ ತಾ.ಪಂ. ಮಾಜಿ ಸದಸ್ಯ ಮಾಧವ್ ಪ್ರಸಾದ್, ತಮ್ಮ ನಾಯಕತ್ವದಲ್ಲಿ ಮಂಡ್ಯ ಜಿಲ್ಲೆಯ ಜವಾಬ್ದಾರಿ ವಹಿಸಿಕೊಂಡು ಏಳು ಕ್ಷೇತ್ರದಲ್ಲಿ 6 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಸಚಿವ ಚಲುವರಾಯಸ್ವಾಮಿ ಕಾರಣಕರ್ತರಾಗಿದ್ದಾರೆ ಎಂದರು.
ಕೃಷಿ ಸಚಿವರಾಗಿರುವ ಎನ್ ಚೆಲುವರಾಯಸ್ವಾಮಿ ಅವರ ಹುಟ್ಟುಹಬ್ಬದ ಪ್ರಯುಕ್ತ ನಮ್ಮ ತಾಲೂಕಿನ ಸಮಾಜ ಸೇವಕ ಬೂಕನಕೆರೆ ವಿಜಯ್ ರಾಮೆಗೌಡರ ಅಭಿಮಾನಿ ಬಳಗದ ವತಿಯಿಂದ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ್ದೇವೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಶಿವಕುಮಾರ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಸವೇಗೌಡ, ಪುರಸಭಾ ಮಾಜಿ ಅಧ್ಯಕ್ಷ ಕೃಷ್ಣೇಗೌಡ, ಕಾಂಗ್ರೆಸ್ ಮುಖಂಡ ಹೊಸಹೊಳಲು ಪ್ರಕಾಶ್, ಆಲಂಬಾಡಿ ಕಾವಲು ಸಿದ್ದಿಕ್, ಆಘಲಯ ರಮೇಶ್, ಬೂಕನಕೆರೆ ಮಲ್ಲಿಕಾರ್ಜುನ್, ಗ್ರಾ.ಪಂ.ಮಾಜಿ ಅಧ್ಯಕ್ಷ ನಾಟನಹಳ್ಳಿ ಧನಂಜಯ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಹೊಸಹೊಳಲು ಪ್ರವೀಣ್ ಕುಮಾರ್, ಹೆಮ್ಮನಹಳ್ಳಿ ಮಂಜೇಗೌಡ, ವಿಜಯ ರಾಮೇಗೌಡ ಆಪ್ತ ಸಹಾಯಕ ಬಸವರಾಜು, ಬೂಕನಕೆರೆ ಅಜಯ್, ರವಿ, ಅಭಿಷೇಕ್, ವರುಣ್ ಸೇರಿದಂತೆ ಕಾಂಗ್ರೆಸ್ ಮುಖಂಡ ವಿಜಯರಾಮೇಗೌಡ ಅಭಿಮಾನಿಗಳು ಉಪಸ್ಥಿತರಿದ್ದರು.