ಚುನಾವಣೆಯ ಪೂರ್ವ ಭರವಸೆಯಂತೆ ನುಡಿದಂತೆ ನಡೆದ ಕಾಂಗ್ರೆಸ್ ರಾಜ್ಯ ಸರ್ಕಾರಕ್ಕೆ ಜನರ ಶ್ರೀರಕ್ಷೆ ಇದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.
ನಾಗಮಂಗಲ ತಾಲೂಕಿನ ವಿವಿಧ ಭಾಗಗಳಲ್ಲಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡುವ ಮುಖಾಂತರ ಯೋಜನೆಗಳಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸರ್ಕಾರವು ನೀಡಿದ ಭರವಸೆ ಹಾಗೂ ನುಡಿದಂತೆ ನಡೆದ ಸರ್ಕಾರ ಗ್ಯಾರೆಂಟಿ ಯೋಜನೆಗಳ ಅನುಷ್ಠಾನದೊಂದಿಗೆ ಜನಪರ ಹಾಗೂ ಆರ್ಥಿಕ ಸಾವಲಂಬನೆಯ ಗುರಿಯನ್ನು ತಲುಪುವ ಉದ್ದೇಶದೊಂದಿಗೆ ಗ್ಯಾರೆಂಟಿ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮದೊಂದಿಗೆ ರಾಜ್ಯದ ಜನತೆ ಆಶೀರ್ವಾದ ನೀಡಿದ್ದು ಮತ್ತೊಮ್ಮೆ ಅಭಿವೃದ್ಧಿ ಯೋಜನೆಗಳನ್ನು ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳೊಂದಿಗೆ ಹೊಸ ಅನುಷ್ಠಾನ ತರುವ ಪ್ರಯತ್ನದೊಂದಿಗೆ ಜನಬೆಂಬಲ ಇದೆ ಎಂದು ಮಾತನಾಡಿದರು.
ಕೇವಲ ಚುನಾವಣೆಯ ಭರವಸೆ ಅಲ್ಲದೆ ಅನುಷ್ಠಾನಗೊಂಡಿರುವ ಯೋಜನೆಗಳನ್ನು ಕಾರ್ಯಗತಗೊಳಿಸುವ ಸರ್ಕಾರದ ಉದ್ದೇಶ ಹೊಂದಿದ್ದು ಇಂತಹ ಹಲವಾರು ಯೋಜನೆಗಳ ಮಹಾಪುರವೇ ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.
ಮಂಡ್ಯ ಜಿಲ್ಲೆಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು ಇದರಲ್ಲಿ ಯಾವುದೇ ಹಣ ಬಲ ಇರುವ ವ್ಯಕ್ತಿಯನ್ನು ಅಭ್ಯರ್ಥಿ ಘೋಷಣೆ ಮಾಡಿರುವುದನ್ನು ಅವರು ಸ್ವತಃ ಪಕ್ಷಕ್ಕೆ ದುಡಿಯುತ್ತಿದ್ದು ಅವರ ವೈಯಕ್ತಿಕವಾಗಿ ದುಡಿಮೆ ಬೇರೆಯಾಗಿದೆ. ಇದಕ್ಕೆ ಯಾವುದೇ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಮತ್ತೊಮ್ಮೆ ಸ್ವಾಭಿಮಾನ ಚುನಾವಣೆ ಎದುರಿಸಲು ಸಜ್ಜಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ. ಮಂಡ್ಯ ಜಿಲ್ಲೆಯ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಗೌಡ (ಸ್ಟಾರ ಚಂದ್ರು), ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್, ತಿಮ್ಮಪ್ಪ ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಗಣ್ಯರು ಹಾಜರಿದ್ದರು