ಮಂಡ್ಯ ತಾಲ್ಲೂಕಿನ ದುದ್ದ ಹೋಬಳಿಯ ಚಂದಗಾಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘ(ಡೇರಿ) ದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನೆಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದೊಡ್ಡಜೋಗಿಗೌಡ, ಉಪಾಧ್ಯಕ್ಷರಾಗಿ ಕುಮಾರ ಅವರು ಅವಿರೋಧವಾಗಿ ಆಯ್ಕೆಯಾದರು.
11 ಮಂದಿ ಸದಸ್ಯ ಬಲವುಳ್ಳ ಎಂಪಿಸಿಎಸ್ ಆಡಳಿತ ಮಂಡಳಿಯಲ್ಲಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಆಯ್ಕೆಯಾದ ಹಿನ್ನೆಲೆಯಲ್ಲಿ ಮನ್ ಮುಲ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ಬಿ.ಆರ್. ರಾಮಚಂದ್ರ, ಉಪಾಧ್ಯಕ್ಷ ಎಂ.ಎಸ್. ರಘುನಂದನ್ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.
ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹಾಗೂ ಸದಸ್ಯರನ್ನು ಅಭಿನಂದಿಸಿ ಮಾತನಾಡಿದ ಬಿ.ಆರ್. ರಾಮಚಂದ್ರ ಅವರು ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ದಿಯತ್ತ ಡೈರಿಯನ್ನು ಕೊಂಡೊಯ್ಯಬೇಕು. ಹಾಗೂ ಹಾಲು ಉತ್ಪಾದಕರನ್ನು ಉತ್ತೇಜಿಸುವ ರೀತಿ ಕೆಲಸ ಮಾಡಿ ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು.
ಸರಕಾರದ ಹಾಗೂ ಮನ್ ಮುಲ್ನ ಎಲ್ಲಾ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘವನ್ನು ಪ್ರಗತಿಯತ್ತ ಮುನ್ನೆಡೆಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ಸಿ.ಕೆ.ಬೋರಯ್ಯ, ಸಿ.ಜೆ.ಕುಮಾರ, ಶಂಕರಗೌಡ,ವಿಜಯಕುಮಾರ್, ಉಮೇಶ್, ಗಂಗಾಧರ್, ಮಂಗಳ,ಸಾಕಮ್ಮ, ನಿಂಗೇಗೌಡ, ಮುಖಂಡರಾದ ಶ್ರೀಧರ್, ಕುಶಾಲ್, ರಘು, ನಿರಂಜನ್ ಪಟೇಲ್, ಚೆನ್ನೇಗೌಡ, ನವೀನ್ ಪಟೇಲ್, ಜೋಗಿ ಗೌಡ, ಕೆಂಪೇಗೌಡ