Thursday, September 19, 2024

ಪ್ರಾಯೋಗಿಕ ಆವೃತ್ತಿ

ಅಕ್ಕಿಹೆಬ್ಬಾಳು ಲಕ್ಷ್ಮಿನರಸಿಂಹಸ್ವಾಮಿ ಮಹಾರಥೋತ್ಸವ

ಕೆ ಆರ್ ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಸುಪ್ರಸಿದ್ಧ ದೇವಾಲಯ ಲಕ್ಷ್ಮಿನರಸಿಂಹಸ್ವಾಮಿ ದೇವರ ಮಹಾರಥೋತ್ಸವಕ್ಕೆ ಸಚಿವ ಡಾ.ನಾರಾಯಣಗೌಡ ಸೋಮವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಪ್ರತಿವರ್ಷವೂ ಅಕ್ಕಿಹೆಬ್ಬಾಳು ಗ್ರಾಮದ ಎಲ್ಲಾ ಸಮುದಾಯದ ಹಿರಿಯ ಮುಖಂಡರು, ಗ್ರಾಮಸ್ಥರು, ಮಹಿಳೆಯರು, ಯುವಕರು ಮಕ್ಕಳು ಸೇರಿ ರಥೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಿಕೊಂಡು ಬರುತ್ತಿರುವುದು ಸಂತೋಷದ ಸಂಗತಿ ಎಂದರೆ ತಪ್ಪಾಗಲಾರದು. ಇದನ್ನು ಇನ್ನೂ ಹೆಚ್ಚಿನ ರೀತಿ‌  ಮುಂದುವರೆಸಿಕೊಂಡು ಮುಂದಿನ ಪೀಳಿಗೆಗೆ ತಿಳಿಸುವ ಶಕ್ತಿಯನ್ನು ಭಗವಂತ ನಿಮಗೆ ಶಕ್ತಿ ನೀಡಲಿ ಹಾಗೂ ಲಕ್ಷ್ಮಿ ನರಸಿಂಹ ಸ್ವಾಮಿ ದೇವರ ಆಶೀರ್ವಾದ ಸದಾಕಾಲವೂ ಇರಲಿ.ನಾನು ಸಹ ದೇವರ ಒಬ್ಬ ಭಕ್ತನಾಗಿ ಆಗಮಿಸಿ ಪೂಜೆ ಸಲ್ಲಿಸಿದ್ದೇನೆ ಎಂದು ತಿಳಿಸಿದರು.

ಜಾತ್ರಾ ಮಹೋತ್ಸವಕ್ಕೆ ಅಕ್ಕಿಹೆಬ್ಬಾಳು ಗ್ರಾಮದ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ಭಕ್ತಾದಿಗಳಿಗೆ ಅನ್ನದಾಸೋಹವನ್ನು ಏರ್ಪಡಿಸಲಾಗಿತ್ತು. ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್, ಎ.ಆರ್.ರಘು, ಗ್ರಾ.ಪಂ.ಅಧ್ಯಕ್ಷೆ ನಾಗೇಶ್ವರಿ, ಪಿಡಿಓ ರವಿಕುಮಾರ್, ಸದಸ್ಯರಾದ ಅಣ್ಣಯ್ಯ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!