ನಾಳೆ (ಜು.24) ನಡೆಯಲಿರುವ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್) ಅಧ್ಯಕ್ಷ ಚುನಾವಣೆಗೂ ಮುನ್ನಾ ಬಿಜೆಪಿ ಬೆಂಬಲಿತ ಇಬ್ಬರು ನಿರ್ದೇಶಕರನ್ನು ಅಮಾನತ್ತು ಮಾಡಲು ಕಾಂಗ್ರೆಸ್ ಸರ್ಕಾರ ಹುನ್ನಾರ ನಡೆಸಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಈರೇಮನೆ ಆರೋಪಿಸಿದರು.
ಭಾನುವಾರ ಮಧ್ಯಾಹ್ನ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಬೆಂಬಲಿತ ನಿರ್ದೇಶಕರಾದ ರೂಪ ಹಾಗೂ ಸಾದೊಳಲು ಸ್ವಾಮಿ ಅವರನ್ನು ಅಮಾನತುಗೊಳಿಸಿ ಕಾಂಗ್ರೆಸ್ ಬೆಂಬಲಿತರು ಅಧಿಕಾರ ಹಿಡಿಯಲು ಮುಂದಾಗಿದ್ದಾರೆ. ಬಿಜೆಪಿ ನಿರ್ದೇಶಕರೊಬ್ಬರ ವಿವಾದ, 15 ವರ್ಷಗಳ ಹಿಂದಿನ ಪ್ರಕರಣ ಹೈಕೋರ್ಟ್’ನಲ್ಲಿ ವಿಚಾರಣಾ ಹಂತದಲ್ಲಿದೆ. ಹೀಗಿರುವಾಗ ಜೆಡಿಎಸ್ ಬೆಂಬಲಿಸುತ್ತಾರೆ ಎಂಬ ಕಾರಣ ಮುಂದಿಟ್ಟುಕೊಂಡು ಅಮಾನತು ಮಾಡುವ ಸಂಚು ರೂಪಿಸಲಾಗುತ್ತಿದೆ. ಹಾಗೆ ಮಾಡಿದರೆ ಮನ್’ಮುಲ್ ಬಳಿ ಬಿಜೆಪಿ ಪಕ್ಷದ ವತಿಯಿಂದ ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು.
ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ಮನ್’ಮುಲ್ ನಿರ್ದೇಶಕರಾದ ರೂಪ, ಮುಖಂಡ ಸಿದ್ದರಾಮಯ್ಯ ಹಾಜರಿದ್ದರು.