Friday, September 20, 2024

ಪ್ರಾಯೋಗಿಕ ಆವೃತ್ತಿ

ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ರಾಜೇಗೌಡ ಆಯ್ಕೆ

ಮಂಡ್ಯ ತಾಲೂಕು ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘ ನಿಯಮಿತ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ರಾಜೇಗೌಡ ಅವಿರೋಧ ಆಯ್ಕೆಯಾದರು.

ಮಂಡ್ಯ ನಗರದ ರೆಡ್‌ ಕ್ರಾಸ್‌ ಭವನದಲ್ಲಿ ಮಂಡ್ಯ ತಾಲೂಕು ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘ ಆಯೋಜಿಸಿದ್ದ ಸಂಘದ ಆಡಳಿತ ಮಂಡಳಿಯ ಚುನಾವಣೆಗೆ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ರಾಜೇಗೌಡ ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಮುಕ್ತ ಅವರು ಘೋಷಿಸಿದರು.

ನೂತನ ಅಧ್ಯಕ್ಷ ರಾಜೇಗೌಡ ಮಾತನಾಡಿ, ಸಂಘದಲ್ಲಿ 14 ಮಂದಿ ನಿರ್ದೇಶಕರಿದ್ದು ಇವರ ಸಹಕಾರ ಮತ್ತು ಮಾಜಿ ಅಧ್ಯಕ್ಷರ ಮಾರ್ಗದರ್ಶನ, ಸಲಹೆಗಳನ್ನು ಪಡೆದು ಸಂಘದ ಅಭಿವೃದ್ದಿಗೆ ಶ್ರಮಿಸುತ್ತೇನೆ ಎಂದರು.

ಇದೇ ಸಂದರ್ಭದಲ್ಲಿ ಎಲ್ಲಾ ನಿರ್ದೇಶಕರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಸಂಘದ ಮಾಜಿ ಅಧ್ಯಕ್ಷ ಎಚ್.ಸಿ.ಶಿವಣ್ಣ, ಕುಮಾರ್, ಕೃಷ್ಣ, ಲಿಂಗರಾಜು, ಎಸ್.ಕೆ.ರಾಜು, ಕೆ. ಶಾರದಾ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!