ಮಳವಳ್ಳಿ ತಾಲೂಕಿನ ಕ್ಯಾತೇ ಗೌಡನ ದೊಡ್ಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಚಿಕ್ಕ ಅಣ್ಣೇಗೌಡ, ಉಪಾಧ್ಯಕ್ಷರಾಗಿ ಮಹದೇವಮ್ಮ ಅವಿರೋಧ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಚಿಕ್ಕಅಣ್ಣೇಗೌಡ, ಸಂಘದ ಎಲ್ಲಾ ನಿರ್ದೇಶಕರಿಗೆ ಹಾಗೂ ಸದಸ್ಯರಿಗೆ ನಾನು ಅಭಿನಂದನೆ ಸಲ್ಲಿಸುವೆ, ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಹಾಲು ಉತ್ಪಾದಕರ ಕೇಂದ್ರವನ್ನು ಇನ್ನಷ್ಟು ಅಭಿವೃದ್ಧಿ ಪಡಿಸುತ್ತೇನೆ ಎಂದರು.
ಚುನಾವಣೆ ಅಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಜಿ.ಎಂ ರಾಮಕೃಷ್ಣ ಕರ್ತವ್ಯ ನಿರ್ವಹಿಸಿದರು. ಸಂಘದ ಮಾಜಿ ಅಧ್ಯಕ್ಷ ನಾಗೇಶ್, ಅಕ್ಕಿ ಕೃಷ್ಣ, ನಿಂಗರಾಜು, ಎಪಿಎಸ್ ಸತೀಶ್, ಪ್ರಕಾಶ್, ಶರತ್ ಬಾಬು, ಹಾ.ಉ ಸ ಸಂಘದ ಕಾರ್ಯದರ್ಶಿ ವೆಂಕಟೇಶ್, ಮಹೇಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.