Thursday, September 19, 2024

ಪ್ರಾಯೋಗಿಕ ಆವೃತ್ತಿ

 ಸ್ವಚ್ಛತೆ ಇದ್ದಡೆ ಉತ್ತಮ ಆರೋಗ್ಯ : ಅಶೋಕ್‌ಜಯರಾಂ

ಸ್ವಚ್ಛತೆ ಇದ್ದೆಡೆ ಉತ್ತಮ ಆರೋಗ್ಯವಿರುತ್ತದೆ, ಹಾಗಾಗಿ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿಡಬೇಕೆಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್‌ಜಯರಾಂ ಹೇಳಿದರು.

ಮಂಡ್ಯ ನಗರದ ಗುತ್ತಲು ಬಡಾವಣೆಯ ವೀರಯೋಧರ ಉದ್ಯಾನವನದಲ್ಲಿ ಎಸ್.ಡಿ.ಜಯರಾಂ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ಬಿಜೆಪಿ ಜಿಲ್ಲಾ ಘಟಕ ಆಯೋಜಿಸಿದ್ದ, ಸ್ವಚ್ಛ ಮಂಡ್ಯ ಅಭಿಯಾನ-4 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಂಡ್ಯ ನಗರದಲ್ಲಿರುವ ಹಲವು ಸಾರ್ವಜನಿಕ ಉದ್ಯಾನವನಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಲು ಮುಂದಾಗಿದ್ದೇವೆ, ಪ್ರತಿವಾರದ ಒಂದು ದಿನ ಎಸ್.ಡಿ.ಜಯರಾಂ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ಬಿಜೆಪಿ ಜಿಲ್ಲಾ ಘಟಕ ಹಾಗೂ ಸ್ಥಳೀಯ ನಾಗರಿಕರ ಸಹಕಾರೊಂದಿಗೆ ಸ್ವಚ್ಛತಾ ಅಭಿಯಾನ ನಡೆಸುತ್ತಿದ್ದೇವೆ ಎಂದರು.

ಈ ಕಾರ್ಯಕ್ರಮದಲ್ಲಿ ಎಸ್.ಡಿ.ಜಯರಾಂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ನಗರಸಭೆ ಪೌರಕಾರ್ಮಿಕರು ಪಾಲ್ಗೊಂಡಿದ್ದರು. ಬಿಜೆಪಿ ನಗರ ಮೋರ್ಚಾ ಅಧ್ಯಕ್ಷ ವಿವೇಕ್, ನಗರಸಭಾ ಸದಸ್ಯೆ ವಿದ್ಯಾಮಂಜುನಾಥ್, ಬಿಜೆಪಿ ಮುಖಂಡರಾದ ಶಂಕರ್, ಶಶಿ, ಶಿವಕೆಂಪಯ್ಯ, ಎಂಆರ್‌ಎಂ ರಘು, ವೆಂಕಟೇಶ್, ಅನಿಲ್‌ಕುಮಾರ್, ರವಿ, ಮಧು ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!