Sunday, September 8, 2024

ಪ್ರಾಯೋಗಿಕ ಆವೃತ್ತಿ

ಜು.29ರಂದು ಕನ್ನಂಬಾಡಿಗೆ ಸಿಎಂ ಬಾಗಿನ: ಆಗಮಿಸಲಿದೆ ಸಚಿವರ ದಂಡು

ತುಂಬಿ ತುಳುಕಾಡುತ್ತಿರುವ ಕೃಷ್ಣರಾಜಸಾಗರ ಜಲಾಶಯ ಅಣೆಕಟ್ಟೆಗೆ ಜು.29ರಂದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವ ಸಂಪುಟದ ಸಹೋದ್ಯೋಗಿಗಳು ಬಾಗಿನ ಅರ್ಪಿಸಲಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಗೆ ಕೃಷ್ಣರಾಜಸಾಗರ ಜಲಾಶಯದ ಶ್ರೀಕಾವೇರಿ ಪ್ರತಿಮೆಯ ಬಳಿ ಹಮ್ಮಿಕೊಳ್ಳಲಾಗಿದೆ.

ಆಗಮಿಸಲಿದೆ ಸಚಿವರ ದಂಡು

ಈ ಬಾಗಿನ ಸಮಾರಂಭದಲ್ಲಿ ಜಲ ಸಂಪನ್ಮೂಲ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಂಸದ ಹೆಚ್ ಡಿ ಕುಮಾರಸ್ವಾಮಿ, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ಸಮಾಜ ಕಲ್ಯಾಣ ಸಚಿವ  ಡಾ.ಹೆಚ್.ಸಿ ಮಹದೇವಪ್ಪ, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ  ಎನ್ ಎಸ್ ಬೋಸರಾಜು, ಹೆಚ್.ಡಿ ಕೋಟೆ ಶಾಸಕ ಸಿ.ಅನಿಲ್ ಕುಮಾರ್ ಭಾಗವಹಿಸಲಿದ್ದಾರೆ.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಎ.ಬಿ ರಮೇಶ್ ಬಂಡಿಸಿದ್ದೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸುನೀಲ್ ಬೋಸ್, ವಿಧಾನ ಪರಿಷತ್ ಶಾಸಕರಾದ ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ಕೆ.ವಿವೇಕಾನಂದ, ಹೆಚ್ ವಿಶ್ವನಾಥ್, ಡಾ.ಡಿ ತಿಮ್ಮಯ್ಯ, ಸಿ ಎನ್ ಮಂಜೇಗೌಡ, ಡಾ. ಯತೀಂದ್ರ ಎಸ್, ವಿಧಾನಸಭಾ ಶಾಸಕರಾದ ನರೇಂದ್ರಸ್ವಾಮಿ ಪಿ.ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಹೆಚ್.ಟಿ ಮಂಜುನಾಥ್, ಕೆ.ಎಂ ಉದಯ್, ತನ್ವೀರ್ ಸೇಠ್, ಜಿ.ಟಿ ದೇವೇಗೌಡ, ಡಿ.ರವಿಶಂಕರ್, ಜಿ.ಡಿ ಹರೀಶ್‌ಗೌಡ, ದರ್ಶನ್ ಧೃವನಾರಾಯಣ, ಟಿ.ಎಸ್.ಶ್ರೀವತ್ಸ, ಕೆ.ಹರೀಶ್ ಗೌಡ ಪಾಲ್ಗೊಳ್ಳಲಿದ್ದಾರೆ.

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯೀಮ್, ಮಂಡ್ಯ ಮೈಶುಗರ್ ಕಂಪನಿಯ ಅಧ್ಯಕ್ಷ ಸಿ.ಡಿ ಗಂಗಾಧರ್, ಮೈಸೂರು ಕಾವೇರಿ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಮರಿಸ್ವಾಮಿ, ಕೆ.ಆರ್.ಎಸ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೃತಿ ಎಸ್. ಶ್ರೀನಿವಾಸ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಮರೀಗೌಡ ಭಾಗವಹಿಸಲಿದ್ದಾರೆ.

ಅವರೊಂದಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ಮೈಸೂರು ಪ್ರಾದೇಶಿಕ ಆಯಕ್ತ ಡಾ.ಜಿ.ಸಿ.ಪ್ರಕಾಶ್, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಶೇಖ್ ತನ್ವೀರ್ ಆಸೀಫ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!