ಕರ್ನಾಟಕ ಸರ್ಕಾರದ ನೂತರ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಸೇರಿದಂತೆ ಅವರ ಜತೆಗೆ 8 ಶಾಸಕರು ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆಯುವ ಅದ್ದೂರಿ ಪದಗ್ರಹಣ ಸಮಾವೇಶದಲ್ಲಿ ಸಚಿವರಾಗಿ ಪ್ರಮಾಣ ವಚನ ಮಾಡುವವರ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.
- ಡಾ.ಜಿ ಪರಮೇಶ್ವರ
- ಕೆ.ಎಚ್ ಮುನಿಯಪ್ಪ
- ಕೆ.ಜೆ ಜಾರ್ಜ್
- ಎಂ.ಬಿ ಪಾಟೀಲ್
- ಸತೀಶ್ ಜಾರಕಿಹೊಳಿ
- ಪ್ರಿಯಾಂಕ್ ಖರ್ಗೆ
- ರಾಮಲಿಂಗಾರೆಡ್ಡಿ
- ಜಮೀರ್ ಅಹ್ಮದ್ ಖಾನ್
ಪಟ್ಟಿಯಲ್ಲಿ ಎಲ್ಲಾ ಸಮುದಾಯಗಳಿಗೂ ಪ್ರಾತಿನಿಧ್ಯದ ಆಧಾರದಲ್ಲಿ ಹಿರಿಯರನ್ನು ಹೆಸರಿಸಲಾಗಿದೆ. ಕೆಲವೇ ದಿನಗಳಲ್ಲಿ ಪೂರ್ಣ ಪ್ರಮಾಣ ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ನಡೆಯಲಿದೆ.
ಇಂದು ಮಧ್ಯಾಹ್ನ ಪ್ರಮಾಣ ವಚನ ನಡೆಯಲಿದೆ. ಈ ಕುರಿತು ರಾಜ್ಯಪಾಲರು ಅಧಿಕೃತ ಆಹ್ವಾನ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ಮಿತ್ರ ಪಕ್ಷಗಳ ಪ್ರಮುಖರು ಭಾಗವಹಿಸಲಿದ್ದಾರೆ.