Friday, September 20, 2024

ಪ್ರಾಯೋಗಿಕ ಆವೃತ್ತಿ

ಐದುಪೈಸೆ ಲಂಚ ಪಡೆದಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ

2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ ಮುಖ್ಯಮಂತ್ರಿ ಆಗಿರುವ ಅವಧಿಯಲ್ಲಾಗಲೀ ಎಲ್ಓಸಿ ಗಾಗಿ  ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು, ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ ಕ್ಷೇತ್ರವಾರು 25 ಕೋಟಿಯಂತೆ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ, ಗುತ್ತಿಗೆದಾರರ ಬಾಕಿ ಮೊತ್ತವನ್ನು ಹಂತ ಹಂತವಾಗಿ ಪೂರ್ತಿ ಪಾವತಿಸಲಾಗುವುದು ಎಂದರು.

ಪ್ಯಾಕೇಜ್ ಪದ್ದತಿ ರದ್ದುಗೊಳಿಸುವುದು, ಬಾಕಿ ಮೊತ್ತವನ್ನು ಪಾವತಿಸುವುದು ಸೇರಿದಂತೆ ಗುತ್ತಿಗೆದಾರರು ಮುಂದಿಟ್ಟ ಎಲ್ಲಾ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಇಬ್ಬರೂ ಬಜೆಟ್ ನಲ್ಲೇ ಘೋಷಿಸಿದರು. ಆದರೆ ಇವತ್ತಿನವರೆಗೂ ಒಂದೇ ಒಂದು ರೂಪಾಯಿ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಎಷ್ಟೇ ಅಸಹಕಾರ ಕೊಟ್ಟರೂ ಗುತ್ತಿಗೆದಾರರ ಅಷ್ಟೂ ಹಣವನ್ನು ನಾವೇ ಹಂತ ಹಂತವಾಗಿ ಪಾವತಿಸುತ್ತೇವೆ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಬೋಸ್ ರಾಜು, ಜಮೀರ್ ಅಹಮದ್ ಖಾನ್ ಸೇರಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!