Friday, September 20, 2024

ಪ್ರಾಯೋಗಿಕ ಆವೃತ್ತಿ

ಸಂತ್ರಸ್ತ ಬಾಲಕಿ ಮನೆಗೆ ಜಿಲ್ಲಾಧಿಕಾರಿ ಭೇಟಿ

ಮಳವಳ್ಳಿಯಲ್ಲಿ ಅತ್ಯಾಚಾರಕ್ಕೆ ಬಲಿಯಾದ ಬಾಲಕಿಯ ಮನೆಗೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಘಟನೆ ನಡೆದು ನಾಲ್ಕು ದಿನಗಳಾದ ನಂತರ ಜಿಲ್ಲಾಧಿಕಾರಿಗಳು ಇಂದು ಸಂಜೆ ಪಟ್ಟಣದಲ್ಲಿರುವ ಬಾಲಕಿಯ ನಿವಾಸಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬಾಲಕಿಯ ಅಜ್ಜಿ,ತಂದೆ,ತಾಯಿ ನನ್ನ ಮಗಳ ಪರಿಸ್ಥಿತಿ ಬೇರಾವ ಹೆಣ್ಣು ಮಕ್ಕಳಿಗೂ ಬರಬಾರದು. ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಜಿಲ್ಲಾಧಿಕಾರಿ ಅಶ್ವತಿ ಅವರಿಗೆ ಕೈ ಮುಗಿದು ಬೇಡಿಕೊಂಡರು.

ಇದಕ್ಕೆ ಪ್ರತಿಯಾಗಿ ಡಿಸಿ ಅಶ್ವತಿಯವರು ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಪ್ರಯತ್ನ ಮಾಡಲಿದೆ ಎಂದು ಭರವಸೆ ನೀಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!