ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ
ಹೊರಿಸಿರುವ ಜಿಲ್ಲೆಯ ಏಳು ತಾಲ್ಲೂಕುಗಳ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಮೂಲಕ ಪ್ರತಿ ಸಹಾಯಕ ಕೃಷಿ ಅಧಿಕಾರಿಗಳಿಂದ ತಲಾ 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಸಹಾಯಕ ಕೃಷಿ ಅಧಿಕಾರಿಗಳು ಆರೋಪಿಸಿ, ರಾಜ್ಯಪಾಲರಿಗೆ ಪತ್ರ ಮುಖೇನ ದೂರು ಸಲ್ಲಿಸಿದ್ದಾರೆ.
ಸಹಾಯಕ ಕೃಷಿ ನಿರ್ದೇಶಕರಿಂದ ರಾಜಭವನಕ್ಕೆ ದೂರು ವಿಚಾರ ಮಂಡ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದೆ.
| #mandya | #nagamangala | #karnatakastategovernment | #Cheluvarayaswamy | #agriculture | #Minister | pic.twitter.com/9AHI3DxKuO
— N Chaluvarayaswamy (@Chaluvarayaswam) August 7, 2023
“>
ಮಂಡ್ಯ, ಮಳ್ಳವಳ್ಳಿ, ಕೆ.ಆರ್. ಪೇಟೆ, ನಾಗಮಂಗಲ, ಮದ್ದೂರು, ಶ್ರೀರಂಗಪಟ್ಟಣ ಮತ್ತು ಪಾಂಡವರ ಕೃಷಿ ಸಹಾಯಕ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದು,ಸಚಿವ ಚಲುವರಾಯಸ್ವಾಮಿ ಅವರು ಲಂಚ ನೀಡುವಂತೆ ಒತ್ತಾಯಿಸುತ್ತಿದ್ದು, ಕಡಿವಾಣ ಹಾಕದಿದ್ದರೆ ನಾವೆಲ್ಲಾ ಕುಟುಂಬ ಸದಸ್ಯರ ಜೊತೆಗೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆಂದು ದೂರು ನೀಡಿರುವ ಪತ್ರದಲ್ಲಿ ಹೇಳಿದ್ದಾರೆ.
ಸಚಿವರ ವಿರುದ್ಧದ ದೂರಿನ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಅವರಿಗೆ ಪತ್ರ ಬರೆದಿರುವ ರಾಜ್ಯಪಾಲರು, ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಈ ಮಧ್ಯೆ ತಮ್ಮ ಮೇಲೆ ಲಂಚದ ಆರೋಪ ಮಾಡಿ ರಾಜ್ಯಪಾಲರಿಗೆ ಸಹಾಯಕ ಕೃಷಿ ಅಧಿಕಾರಿಗಳು ದೂರು ನೀಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಚಲುವರಾಯಸ್ವಾಮಿ,ಈ ಕುಯ ಇಲಾಖೆ ಕಾರ್ಯದರ್ಶಿಯಿಂದ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.