ಮಂಡ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿರುವ ಮಂಡ್ಯ ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾದ ಡಾ.ಲೀಲಾ ಅಪ್ಪಾಜಿ ಅವರನ್ನು ಸ್ವಾಗತ ಸಮಿತಿಯ ಪದಾಧಿಕಾರಿಗಳು ಮಂಡ್ಯನಗರದ ಅವರ ನಿವಾಸಿಕ್ಕೆ ತೆರಳಿ ಇಂದು ಅಧಿಕೃತ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಶಾಸಕ ಹಾಗೂ ಸ್ವಾಗತ ಸಮಿತಿಯ ಗೌರವ ಅಧ್ಯಕ್ಷ ಸಿ.ಎಸ್.ಪುಟ್ಟರಾಜು ಮಾತನಾಡಿ, ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಡ್ಯ ತಾಲೂಕಿನ ದುದ್ದ ಗ್ರಾಮದಲ್ಲಿ ಡಿ.7ರಂದು ನಡೆಯುವ ಮಂಡ್ಯ ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರನ್ನು ಅಧಿಕೃತವಾಗಿ ಆಹ್ವಾನಿಸಿ ಅಭಿನಂದಿಸಲಾಗುತ್ತಿದೆ ಎಂದು ನುಡಿದರು.
ಮಂಡ್ಯ ತಾಲೂಕಿನ ಎಲ್ಲಾ ಸಾಹಿತಿಗಳು, ಸಹೃಯಿಗಳು, ಸಾಹಿತ್ಯಾಭಿಮಾನಿಗಳು, ಸ್ಥಳೀಯ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಸಾಹಿತ್ಯ ಸಮ್ಮೇಳವನ್ನು ಯಶಸ್ವಿಗೊಳಿಸಿಕೊಡಲು ಮನವಿ ಮಾಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ.ಕೆ.ರವಿಕುಮಾರ್ ಚಾಮಲಾಪುರ ಮಾತನಾಡಿ, ತಾಲೂಕು ಸಮ್ಮೇಳನದಲ್ಲಿ ಸಾಹಿತ್ಯ ಕಾರ್ಯಕ್ರಮವಲ್ಲದೆ, ಉಚಿತ ಆರೋಗ್ಯ ತಪಾಸಣೆ, ಮತದಾರರ ನೋಂದಣಿಗೆ ಆದ್ಯತೆ ನೀಡಲಾಗಿದೆ, ಸ್ಥಳೀಯ ನಾಗರೀಕರು ತಮ್ಮ ಆಧಾರ್ ಕಾರ್ಡ್ ಹಾಗೂ ಇನ್ನಿತರೇ ದಾಖಲೆಗಳನ್ನು ತಂದು ನೊಂದಣಿ ಮಾಡಿಸಿಕೊಳ್ಳಬಹುದು ಎಂದು ನುಡಿದರು.
ಈ ಸಂದರ್ಭದಲ್ಲಿ ಮನ್ಮುಲ್ ಮತ್ತು ಸ್ವಾಗತ ಸಮಿತಿಯ ಅಧ್ಯಕ್ಷ ಬಿ.ಆರ್.ರಾಮಚಂದ್ರು, ಕಸಾಪ ಮಾಜಿ ಅಧ್ಯಕ್ಷೆ ಮೀರಾಶಿವಲಿಂಗಯ್ಯ, ಧರಣೇಂದ್ರಯ್ಯ, ತಾಲ್ಲೂಕು ಕಸಾಪ ಅಧ್ಯಕ್ಷ ಎಂ.ಆರ್.ಮಂಜು ಮುತ್ತಗೆರೆ, ನಗರ ಕಸಾಪ ಅಧ್ಯಕ್ಷೆ ಸುಜಾತಕೃಷ್ಣ, ಪದಾಧಿಕಾರಿಗಳಾದ ಚಂದ್ರಲಿಂಗು, ಧನಂಜಯ, ಆರ್.ಎ.ಪಿ.ಸಿ.ಎಂ.ಎಸ್ ನಿರ್ದೇಶಕ ಯೋಗೇಶ್ ಹೊಳಲು ಮತ್ತಿತರರು ಇದ್ದರು.