ಚಂದ್ರಯಾನ -3 ಯಶಸ್ಸಿಗೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಇದೊಂದು ಇಡೀ ಭಾರತೀಯರ ಹೆಮ್ಮೆ, ಇಸ್ರೋ ಸಾಧನೆ ಅವಿಸ್ಮರಣೀಯ…. ಇದು ಭಾರತೀಯರು ಎಂದೂ ಮರೆಯಲಾಗದ ದಿನ ಎಂದು ಸಚಿವರು ಬಣ್ಣಿಸಿದ್ದಾರೆ. ಚಂದ್ರ ಯಾನ 3 ಯಶಸ್ವಿಯಾಗಿ ಹಾಗೂ ಸುರಕ್ಷಿತವಾಗಿ ಚಂದ್ರನ ಅಂಗಳ ಸ್ಪರ್ಶಿಸಿದೆ. ಮುಂದಿನ ಸಂಶೋಧನೆಗಳು ಇಡೀ ಜಗತ್ತಿಗೆ ಬೆಳಕು ಚೆಲ್ಲುವಂತಾಗಲಿ ಎಂದು ಸಚಿವ ಎನ್ ಚಲುವರಾಯಸ್ವಾಮಿ ಅವರು ಹಾರೈಸಿದ್ದಾರೆ.
ವಿಜ್ಞಾನಿ ರವಿ ಅವರಿಗೆ ವಿಶೇಷ ಅಭಿನಂದನೆ
ಸಾಧನೆಯ ಭಾಗವಾಗಿರುವ ಮಂಡ್ಯ ಜಿಲ್ಲೆಯ ವಿಜ್ಞಾನಿ ರವಿ ಅವರಿಗೆ ವಿಶೇಷ ಅಭಿನಂದನೆ ಇಸ್ರೋ ಈ ಸಾಧನೆಯಲ್ಲಿ ನೂರಾರು ವಿಜ್ಞಾನಿಗಳು ,ತಂತ್ರಜ್ಞರ ದಣಿವರಿಯದ ಶ್ರಮ ಅಡಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಅಂಚೆ ಚಿಟ್ಟನಹಳ್ಳಿ ಗ್ರಾಮದ ಯುವಕ ರವಿ .ಟಿ ಗೌಡ ಅವರು ಹಿರಿಯ ವಿಜ್ಞಾನಿಯಾಗಿ ಈ ಸಾಧಕರ ತಂಡದಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿರುವುದು ನಮೆಲ್ಲರಿಗೂ ಅಭಿಮಾನ ತರುವ ವಿಚಾರ. ಇಸ್ರೋ ಚಂದ್ರಯಾನ 3 ತಂಡಕ್ಕೆ ಹಾಗೂ ಸಾಧನೆಯ ಭಾಗವಾಗಿರುವ ರವಿ.ಪಿ ಗೌಡ ಅವರಿಗೆ ವಿಶೇಷ ಅಭಿನಂದನೆಗಳು ಹಾಗೂ ಅಭಿವಂದನೆಗಳನ್ನು ಸಲ್ಲಸುವುದಾಗಿ ಸಚಿವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.