Thursday, September 19, 2024

ಪ್ರಾಯೋಗಿಕ ಆವೃತ್ತಿ

ನೆಲಮಂಗಲದಲ್ಲಿ ‘ಆಪರೇಷನ್ ಹಸ್ತ’ : ನಗರಸಭೆಯ 11 ಜೆಡಿಎಸ್ ಸದಸ್ಯರು ಕಾಂಗ್ರೆಸ್ ಸೇರ್ಪಡೆ

ವಿಧಾನಸಭಾ ಚುನಾವಣೆಗೆ ಇನ್ನೂ ಮೂರ್‍ನಾಲ್ಕು ತಿಂಗಳು ಬಾಕಿ ಇರುವಂತೆಯೇ ಪಕ್ಷಾಂತರ ಪರ್ವ ಶುರುವಾಗಿದೆ.

ನೆಲಮಂಗಲದಲ್ಲಿ ಜೆಡಿಎಸ್ ಪಕ್ಷವು ನಗರಸಭೆ ಅಧಿಕಾರವನ್ನು ಕಳೆದುಕೊಂಡಿದೆ. ನಗರಸಭೆಗೆ ಆಯ್ಕೆಯಾಗಿದ್ದ ಒಟ್ಟು 14 ಜೆಡಿಎಸ್ ಸದಸ್ಯ ಪೈಕಿ ಬರೋಬರಿ 11 ಸದಸ್ಯರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ನೆಲಮಂಗಲ ನಗರಸಭೆಯ ಜೆಡಿಎಸ್‌ನ ಹಾಲಿ ಅಧ್ಯಕ್ಷರು ಮತ್ತು 11 ಸದಸ್ಯರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ನೂರಾರು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಈ ಸಂದರ್ಭದಲ್ಲಿ  ಮಾಜಿ ಎಂಎಲ್‌ಸಿ ಬೆಮಲ್ ಕಾಂತರಾಜು, ಮುಖಂಡರಾದ ಎನ್. ಶ್ರೀನಿವಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!