ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರನ್ನಾಗಿ ಮಂಡ್ಯ ತಾಲ್ಲೂಕಿನ ಕೊತ್ತತ್ತಿ ಗ್ರಾಮದ ಕೊತ್ತತ್ತಿ ಸಿದ್ದಪ್ಪ ಅವರನ್ನು ನೇಮಿಸಲಾಗಿದೆ ಎಂದು ಓಬಿಸಿ ಘಟಕದ ರಾಜ್ಯಾಧ್ಯಕ್ಷ ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ.
ಪಕ್ಷದ ಹಾಗೂ ರಾಜ್ಯ-ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಹಿಂದುಳಿದ ವರ್ಗಗಳ ವಿಭಾಗದ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾಯೋನ್ಯುಖರಾಗಬೇಕೆಂದು ಸೂಚಿಸಲಾಗಿದೆ.