Sunday, May 19, 2024

ಪ್ರಾಯೋಗಿಕ ಆವೃತ್ತಿ

ಈಶ್ವರಪ್ಪಗೆ ಸಂವಿಧಾನದ ಪಾಠ ಹೇಳಿ ಕೊಡಬೇಕಾಗಿದೆ: ನರೇಂದ್ರಸ್ವಾಮಿ

ಭಾರತದ ಸಂವಿಧಾನವು ದೇಶದ ಎಲ್ಲ ಜನರಿಗೆ ಸಮಾನತೆಯನ್ನು ಖಾತ್ರಿಗೊಳಿಸಿದೆ, ಹೀಗಿರುವಾಗ ಬಾಯಿಗೆ ಬಂದಂತೆ ಮಾತನಾಡುತ್ತಿರುವ ಕೆ.ಎಸ್ ಈಶ್ವರಪ್ಪ ಅವರಿಗೆ ಸಂವಿಧಾನದ ಬಗ್ಗೆ ಪಾಠವನ್ನು ಹೇಳಿಕೊಡಬೇಕಾಗಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿರುಗೇಟು ನೀಡಿದರು.

ಮಳವಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ ಎಸ್ ಈಶ್ವರಪ್ಪನವರು ಮೊದಲು ಸಂವಿಧಾನವನ್ನು ಓದಿ, ಸಮಾನತೆ ಬಗ್ಗೆ ತಿಳಿದುಕೊಳ್ಳಬೇಕು, ಎಲ್ಲ ಧರ್ಮ, ಜಾತಿ, ಜನಾಂಗದವರಿಗೆ ಅಂಬೇಡ್ಕರ್ ಅವರು ಕಲ್ಪಿಸುವ ಅವಕಾಶಗಳನ್ನು ಅರಿತುಕೊಳ್ಳಬೇಕೆಂದು ಸಲಹೆ ನೀಡಿದರು.

ಬಿಜೆಪಿ ಹಿರಿಯ ನಾಯಕ ಕೆ ಎಸ್ ಈಶ್ವರಪ್ಪ ಪ್ರಚೋದನಕಾರಿ ಕೇಳಿಕೆ ನೀಡುತ್ತಾ ಗೊಂದಲ ಸೃಷ್ಟಿಸುತ್ತಿದ್ದಾರೆ. ಅವರಿಗೆ ರಾಷ್ಟ್ರದ ಸಂವಿಧಾನ ಮತ್ತು ಸಹಬಾಳ್ವೆಯ ವಿಚಾರದಲ್ಲಿ ಕಿಂಚಿತ್ತು ಚಿಂತನೆ ಇದ್ದಂತೆ ಕಾಣುತ್ತಿಲ್ಲ, ಸ್ವಜನ ಪಕ್ಷಪಾತ ಮತ್ತು ಧರ್ಮಾಧಾರಿತ ವಿಭಜನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಮಾನವ ಧರ್ಮವನ್ನು ಮರೆತ್ತಿದ್ದಾರೆಂದು ಕುಟುಕಿದರು.

ಮಂಡ್ಯ ಲೋಕಸಭೆಗೆ ಜೆಡಿಎಸ್ ಬಿಜೆಪಿ- ಮೈತ್ರಿ ಅಭ್ಯರ್ಥಿಯಾಗಿ ಯಾರೇ ಸ್ಪರ್ಧಿಸಿದರು ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!