ಸ್ವಚ್ಚ ಭಾರತ ಮಿಷನ್ ಯೋಜನೆ ಹಾಗೂ ಜೊತೆಗೆ ಪುರಸಭೆಯ ನಿಧಿಯಡಿ ಮಳವಳ್ಳಿ ಪಟ್ಟಣದ ಈದ್ಗಾ ಮೊಹಲ್ ಬಳಿ 36ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಹೈಟೆಕ್ ಸಾರ್ವಜನಿಕ ಶೌಚಾಲಯಕ್ಕೆ ಶಾಸಕ ಪಿ ಎಂ ನರೇಂದ್ರಸ್ವಾಮಿ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು ಮಳವಳ್ಳಿ ಪಟ್ಟಣದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯತೆ ಕಾಪಾಡುವ ಹಿತ ದೃಷ್ಟಿಯಿಂದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಪುರಸಭೆ ವತಿಯಿಂದ ವತಿಯಿಂದ ಹೈಟೆಕ್ ಶೌಚಾಲಯಗಳ ನಿರ್ಮಿಸಲಾಗಿದೆ ಎಂದು ತಿಳಿಸಿದರು.
ನಂತರ ಇಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿನ ಶೌಚಾಲಯದ ಒಳಚರಂಡಿ ಕಟ್ಟಿಕೊಂಡಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಸಮಸ್ಯೆ ನಿವಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯರಾದ ನೂರುಲ್ಲಾ. ಅತಿಯಬೇಗಂ. ಪ್ರಮೀಳಾ ಶಿವಸ್ವಾಮಿ, ಇಂದ್ರಮ್ಮ, ಮುಖ್ಯ ಅಧಿಕಾರಿ ನಾಗರತ್ನ, ಪರಿಸರ ಅಭಿಯಂತರ ನಾಗೇಂದ್ರ ಸೇರಿದಂತೆ ಇತರರು ಇದ್ದರು